ಸುದ್ದಿಗಳು

ಅಂಬಿಕಾ ಕಾಲೇಜು | ಯುವಸಮೂಹದ ಕಣ್ಣ ಮುಂದೆ ತುಳುನಾಡ ಸಂಸ್ಕೃತಿಯ ಅನಾವರಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಲೇಜು ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಒಮ್ಮಿಂದೊಮ್ಮೆಗೆ ಆಶ್ಚರ್ಯ…! ಇದೇನು?.  ಅಂತ ಅತ್ತಿತ್ತ ನೋಡುತ್ತಿರುವಾಗಲೇ ಸಾಲು ಸಾಲು ಹುಲಿಗಳು ವೇದಿಕೆಯನ್ನೇರಿ ಕುಣಿಯಲಾರಂಭಿಸಿದ್ದವು. ವೇದಿಕೆಯೊಂದರಲ್ಲೇ ಮೂವತ್ತಕ್ಕಿಂತಲೂ ಅಧಿಕ ಹುಲಿಗಳು ನರ್ತಿಸುವ ಅಪೂರ್ವ ಅವಕಾಶವನ್ನು ನೆರೆದ ಸಾವಿರಾರು ಮಂದಿ ತಮ್ಮದಾಗಿಸಿಕೊಂಡರು.

Advertisement

ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ವಾರ್ಷಿಕೋತ್ಸವ – ಮಾನಸೋಲ್ಲಾಸ 2022-23 ನಡೆಯುತ್ತಿದ್ದ ಮಧ್ಯೆಯಲ್ಲಿ ಈ ಹುಲಿಗಳ ಆಗಮನವಾಯಿತು. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡ ಪ್ರಸ್ತುತಿಯಲ್ಲಿ ಅನೇಕ ಮಂದಿ ಹುಲಿವೇಷಧಾರಿಗಳಾಗಿ ಪುತ್ತೂರಿಗರ ಮನರಂಜಿಸುತ್ತಿದ್ದಾರೆ. ಅದರ ಭಾಗವಾಗಿ ಆ ತಂಡದಿಂದ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸುಮಾರು ಅರ್ಧ ಗಂಟೆಯ ಹುಲಿನರ್ತನ ನಡೆಯಿತು. ಈ ‘ಪಿಲಿ ನಲಿಕೆ’ ಯುವಮನಸ್ಸುಗಳಲ್ಲಿ ತುಳುನಾಡಿನ ಸಂಸ್ಕೃತಿಯ ಭಾಗವನ್ನು ಅನಾವರಣಗೊಳಿಸಿತು.

ಕಪ್ಪು ಹುಲಿಗಳು, ಪಟ್ಟೆ ಹುಲಿಗಳು, ಚಿರತೆ ಬಣ್ಣದ ಹುಲಿಗಳು, ಅವುಗಳ ಜತೆಗೆ ಪುಟಾಣಿ ಹುಲಿಗಳು ಹಿಮ್ಮೇಳದ ಸದ್ದಿನ ಜತೆಗೆ ವೈಭವದ ಹೆಜ್ಜೆಯನ್ನಿರಿಸಿದವು. ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಪಿಲಿ ನಲಿಕೆಯ ನಾನಾ ವೈವಿಧ್ಯಗಳು ತೆರೆದುಕೊಂಡು ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಯಿತು.
ಯುವ ಸಮೂಹವನ್ನು ‘ಪಿಲಿ ನಲಿಕೆ’ ಮೂಲಕ ರಂಜಿಸಿದ ಕಲ್ಲೇಗ ಟೈಗರ್ಸ್ ಅವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಗೌರವಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಅಡಿಕೆ ಹಾಳೆ ತಟ್ಟೆ ಅಮೆರಿಕದಲ್ಲಿ ಬ್ಯಾನ್ …

ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…

21 hours ago

ಅಡಿಕೆ ಧಾರಣೆ ಏರುಪೇರು ಯಾಕಾಗಿ?

ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…

1 day ago

ಹವಾಮಾನ ವರದಿ | 14-05-2025 | ಗುಡುಗು ಸಹಿತ ಮಳೆಯ ಮುನ್ಸೂಚನೆ | ಮೇ.27 ಸುಮಾರಿಗೆ ಕೇರಳ ಹಾಗೂ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ

ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…

1 day ago

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ – ಈಶ್ವರ ಖಂಡ್ರೆ

ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

1 day ago