ಕಾಲೇಜು ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಗೆ ಒಮ್ಮಿಂದೊಮ್ಮೆಗೆ ಆಶ್ಚರ್ಯ…! ಇದೇನು?. ಅಂತ ಅತ್ತಿತ್ತ ನೋಡುತ್ತಿರುವಾಗಲೇ ಸಾಲು ಸಾಲು ಹುಲಿಗಳು ವೇದಿಕೆಯನ್ನೇರಿ ಕುಣಿಯಲಾರಂಭಿಸಿದ್ದವು. ವೇದಿಕೆಯೊಂದರಲ್ಲೇ ಮೂವತ್ತಕ್ಕಿಂತಲೂ ಅಧಿಕ ಹುಲಿಗಳು ನರ್ತಿಸುವ ಅಪೂರ್ವ ಅವಕಾಶವನ್ನು ನೆರೆದ ಸಾವಿರಾರು ಮಂದಿ ತಮ್ಮದಾಗಿಸಿಕೊಂಡರು.
ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ವಾರ್ಷಿಕೋತ್ಸವ – ಮಾನಸೋಲ್ಲಾಸ 2022-23 ನಡೆಯುತ್ತಿದ್ದ ಮಧ್ಯೆಯಲ್ಲಿ ಈ ಹುಲಿಗಳ ಆಗಮನವಾಯಿತು. ಪುತ್ತೂರಿನ ಕಲ್ಲೇಗ ಟೈಗರ್ಸ್ ತಂಡ ಪ್ರಸ್ತುತಿಯಲ್ಲಿ ಅನೇಕ ಮಂದಿ ಹುಲಿವೇಷಧಾರಿಗಳಾಗಿ ಪುತ್ತೂರಿಗರ ಮನರಂಜಿಸುತ್ತಿದ್ದಾರೆ. ಅದರ ಭಾಗವಾಗಿ ಆ ತಂಡದಿಂದ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಸುಮಾರು ಅರ್ಧ ಗಂಟೆಯ ಹುಲಿನರ್ತನ ನಡೆಯಿತು. ಈ ‘ಪಿಲಿ ನಲಿಕೆ’ ಯುವಮನಸ್ಸುಗಳಲ್ಲಿ ತುಳುನಾಡಿನ ಸಂಸ್ಕೃತಿಯ ಭಾಗವನ್ನು ಅನಾವರಣಗೊಳಿಸಿತು.
ಕಪ್ಪು ಹುಲಿಗಳು, ಪಟ್ಟೆ ಹುಲಿಗಳು, ಚಿರತೆ ಬಣ್ಣದ ಹುಲಿಗಳು, ಅವುಗಳ ಜತೆಗೆ ಪುಟಾಣಿ ಹುಲಿಗಳು ಹಿಮ್ಮೇಳದ ಸದ್ದಿನ ಜತೆಗೆ ವೈಭವದ ಹೆಜ್ಜೆಯನ್ನಿರಿಸಿದವು. ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಮುಂಭಾಗದಲ್ಲಿ ನಿರ್ಮಿಸಲಾಗಿರುವ ಶ್ರೀ ಶಂಕರ ಸಭಾಭವನದ ಶ್ರೀ ಲಲಿತಾಂಬಿಕಾ ವೇದಿಕೆಯಲ್ಲಿ ಪಿಲಿ ನಲಿಕೆಯ ನಾನಾ ವೈವಿಧ್ಯಗಳು ತೆರೆದುಕೊಂಡು ವಿಶಿಷ್ಟ ಕ್ಷಣಕ್ಕೆ ಸಾಕ್ಷಿಯಾಯಿತು. ಯುವ ಸಮೂಹವನ್ನು ‘ಪಿಲಿ ನಲಿಕೆ’ ಮೂಲಕ ರಂಜಿಸಿದ ಕಲ್ಲೇಗ ಟೈಗರ್ಸ್ ಅವರನ್ನು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಗೌರವಿಸಿದರು.ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…