Advertisement
ಸುದ್ದಿಗಳು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Share

ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮಥ್ರ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು.

Advertisement
Advertisement
Advertisement
Advertisement
ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ  ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಎರಡು ವಿಧ ಇದೆ. ಒಂದು ಆಡಿ ಅನುಭವಿಸುವುದು ಇನ್ನೊಂದು ನೋಡಿ ಅನುಭವಿಸುವುದು. ಆಡಿ ಅನುಭವಿಸುವುದು ಕಷ್ಟದ ಕೆಲಸ. ಆದರೆ ಅದರಿಂದ ನಮ್ಮ ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ಅμÉ್ಟೀ ಅಲ್ಲದೆ ದೈಹಿಕ ಸಾಮಥ್ರ್ಯವೂ ಕೂಡ ಬೆಳವಣಿಗೆಯಾಗುತ್ತದೆ. ಹೀಗಾಗಿ ಆಡುವ ಮೂಲಕ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
Advertisement
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕ್ರೀಡೆ ಶಿಕ್ಷಣಕ್ಕೆ ಅವಶ್ಯಕ, ಸಣ್ಣ ಮಗು ಯಾವಾಗ ತನ್ನನ್ನು ತಾನು ಆಟಕ್ಕೆ ಅಳವಡಿಸಿಕೊಳ್ಳುತ್ತದೋ ಆಗ ಮನೋವಿಕಾಸವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ, ಶಾಲಾ ನಾಯಕಿ ಸಂಸ್ಕೃತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ, ಸೂರ್ಯ, ಮನ್ವಿತ್ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
Advertisement
ಅಂಬಿಕಾ ವಿದ್ಯಾಲಯದ ಐರಾವತ, ಕಲ್ಪವೃಕ್ಷ, ಕಾಮಧೇನು, ಅಮೃತ ತಂಡದ ವಿದ್ಯಾರ್ಥಿಗಳು ಪಥಸಂಚನದಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ದೈಹಿಕ ಶಿಕ್ಷಕಿ ಸುಚಿತ್ರಾ ಸ್ವಾಗತಿಸಿ, ಪ್ರಾಂಶುಪಾಲೆ ಮಾಲತಿ.ಡಿ ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ಅರುಂಧತಿ, ಅನಘ ವಿ. ಪಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಬಜೆಟ್‌ | ರೈತರಿಗೆ ಕಿಸಾನ್ ಕಾರ್ಡ್ ನಿಂದ ಪ್ರಯೋಜನ | ಕೃಷಿ ವಲಯಕ್ಕೆ 137757 ಕೋಟಿ ಅನುದಾನ |

ಕೇಂದ್ರ ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…

14 hours ago

ಆನೆಗಳ ಚಲನ ವಲನಗಳ ಬಗ್ಗೆ ಸ್ವದೇಶಿ ನಿರ್ಮಿತ ರೇಡಿಯೊ ಕಾಲರ್ ಅಳವಡಿಕೆ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…

14 hours ago

ಹೊಸರುಚಿ | ಪಪ್ಪಾಯ ಹಣ್ಣು ಬರ್ಫಿ

ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…

22 hours ago

ಸೀತೆ ಪುನೀತೆಯೆ ? ಮತ್ತೊಮ್ಮೆ ಅಗ್ನಿ ಪರೀಕ್ಷೆಯೇ?

ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…

1 day ago

ಎಲ್ಲಾ ಕೃಷಿ ಆದಾಯವನ್ನು ಬ್ಯಾಂಕ್‌ ಉಳಿತಾಯ ಖಾತೆ ಮೂಲಕ ವ್ಯವಹಾರ ಮಾಡಬೇಕು ಏಕೆ..?

ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…

2 days ago

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ

ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…

2 days ago