Advertisement
ಸುದ್ದಿಗಳು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Share

ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮಥ್ರ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು.

Advertisement
ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ  ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಎರಡು ವಿಧ ಇದೆ. ಒಂದು ಆಡಿ ಅನುಭವಿಸುವುದು ಇನ್ನೊಂದು ನೋಡಿ ಅನುಭವಿಸುವುದು. ಆಡಿ ಅನುಭವಿಸುವುದು ಕಷ್ಟದ ಕೆಲಸ. ಆದರೆ ಅದರಿಂದ ನಮ್ಮ ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ಅμÉ್ಟೀ ಅಲ್ಲದೆ ದೈಹಿಕ ಸಾಮಥ್ರ್ಯವೂ ಕೂಡ ಬೆಳವಣಿಗೆಯಾಗುತ್ತದೆ. ಹೀಗಾಗಿ ಆಡುವ ಮೂಲಕ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕ್ರೀಡೆ ಶಿಕ್ಷಣಕ್ಕೆ ಅವಶ್ಯಕ, ಸಣ್ಣ ಮಗು ಯಾವಾಗ ತನ್ನನ್ನು ತಾನು ಆಟಕ್ಕೆ ಅಳವಡಿಸಿಕೊಳ್ಳುತ್ತದೋ ಆಗ ಮನೋವಿಕಾಸವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ, ಶಾಲಾ ನಾಯಕಿ ಸಂಸ್ಕೃತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ, ಸೂರ್ಯ, ಮನ್ವಿತ್ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಅಂಬಿಕಾ ವಿದ್ಯಾಲಯದ ಐರಾವತ, ಕಲ್ಪವೃಕ್ಷ, ಕಾಮಧೇನು, ಅಮೃತ ತಂಡದ ವಿದ್ಯಾರ್ಥಿಗಳು ಪಥಸಂಚನದಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ದೈಹಿಕ ಶಿಕ್ಷಕಿ ಸುಚಿತ್ರಾ ಸ್ವಾಗತಿಸಿ, ಪ್ರಾಂಶುಪಾಲೆ ಮಾಲತಿ.ಡಿ ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ಅರುಂಧತಿ, ಅನಘ ವಿ. ಪಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

10 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago