Advertisement
ಸುದ್ದಿಗಳು

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Share

ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮಥ್ರ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು.

ಅವರು ಪುತ್ತೂರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಕೊಂಬೆಟ್ಟಿನ ತಾಲೂಕು ಕ್ರೀಡಾಂಗಣದಲ್ಲಿ  ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಎರಡು ವಿಧ ಇದೆ. ಒಂದು ಆಡಿ ಅನುಭವಿಸುವುದು ಇನ್ನೊಂದು ನೋಡಿ ಅನುಭವಿಸುವುದು. ಆಡಿ ಅನುಭವಿಸುವುದು ಕಷ್ಟದ ಕೆಲಸ. ಆದರೆ ಅದರಿಂದ ನಮ್ಮ ಬುದ್ಧಿ ಶಕ್ತಿ ವೃದ್ಧಿಯಾಗುತ್ತದೆ. ಅμÉ್ಟೀ ಅಲ್ಲದೆ ದೈಹಿಕ ಸಾಮಥ್ರ್ಯವೂ ಕೂಡ ಬೆಳವಣಿಗೆಯಾಗುತ್ತದೆ. ಹೀಗಾಗಿ ಆಡುವ ಮೂಲಕ ಬುದ್ಧಿ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಕ್ರೀಡೆ ಶಿಕ್ಷಣಕ್ಕೆ ಅವಶ್ಯಕ, ಸಣ್ಣ ಮಗು ಯಾವಾಗ ತನ್ನನ್ನು ತಾನು ಆಟಕ್ಕೆ ಅಳವಡಿಸಿಕೊಳ್ಳುತ್ತದೋ ಆಗ ಮನೋವಿಕಾಸವಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ, ಆಡಳಿತ ಮಂಡಳಿಯ ಸದಸ್ಯ ಸುರೇಶ್ ಶೆಟ್ಟಿ, ಶಾಲಾ ನಾಯಕಿ ಸಂಸ್ಕೃತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಹಾಗು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಜಯಲಕ್ಷ್ಮಿ, ಸೂರ್ಯ, ಮನ್ವಿತ್ ಕ್ರೀಡಾ ಜ್ಯೋತಿಯನ್ನು ಅತಿಥಿಗಳಿಗೆ ಹಸ್ತಾಂತರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಅಂಬಿಕಾ ವಿದ್ಯಾಲಯದ ಐರಾವತ, ಕಲ್ಪವೃಕ್ಷ, ಕಾಮಧೇನು, ಅಮೃತ ತಂಡದ ವಿದ್ಯಾರ್ಥಿಗಳು ಪಥಸಂಚನದಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಮೆರುಗು ತಂದರು. ದೈಹಿಕ ಶಿಕ್ಷಕಿ ಸುಚಿತ್ರಾ ಸ್ವಾಗತಿಸಿ, ಪ್ರಾಂಶುಪಾಲೆ ಮಾಲತಿ.ಡಿ ಭಟ್ ವಂದಿಸಿದರು. ವಿದ್ಯಾರ್ಥಿಗಳಾದ ಅರುಂಧತಿ, ಅನಘ ವಿ. ಪಿ ಕಾರ್ಯಕ್ರಮ ನಿರ್ವಹಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

6 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

2 days ago