Advertisement
ಸುದ್ದಿಗಳು

ಅಂಬಿಕಾ ಕಾಲೇಜಿನ ಎನ್.ಎಸ್.ಎಸ್ ತಂಡದಿಂದ ನಗರದಲ್ಲಿ ಜಾಗೃತಿ ಅರಿವು ಕಾರ್ಯಕ್ರಮ

Share

ನಾವಿಂದು ಚಂದ್ರಲೋಕಕ್ಕೂ ಅಡಿಯಿಡುವ ಯೋಗ್ಯತೆಯನ್ನು ಸಂಪಾದಿಸಿದ್ದೇವೆ. ಆದರೆ ಪಕ್ಕನ ಮನೆಗೆ ಹೋಗಲಾರದಷ್ಟು ಸಮಯಹೀನರಾಗಿದ್ದೇವೆ. ಮನುಷ್ಯನ ಮೌಲ್ಯಗಳು ಹಂತಹಂತವಾಗಿ ಕುಸಿಯುತ್ತಿವೆ. ಆದ್ದರಿಂದ ನಿರ್ನಾಮವಾಗುತ್ತಿರುವ ಮೌಲ್ಯಗಳನ್ನು ನಿರ್ಮಾಣ ಮಾಡುವ ಕಾರ್ಯ ಆಗಬೇಕಿದೆ. ನಮ್ಮ ಸುತ್ತಲಿನ ಪರಿಸರವನ್ನು ಚೆನ್ನಾಗಿ ರೂಪಿಸುವ ಗುಣವನ್ನು ಬೆಳೆಸಿಕೊಳ್ಳಬೇಕಿದೆ ಎಂದು ಪುತ್ತೂರಿನ ಹಿರಿಯ ನ್ಯಾಯವಾದಿ ಚಿದಾನಂದ ಬೈಲಾಡಿ ಹೇಳಿದರು.

ಅವರು ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಸೋಮವಾರ ಆಯೋಜಿಸಲಾದ ಸ್ವಚ್ಚ ಭಾರತ – ಜಾಗೃತಿ ಅರಿವು ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಭಾಗದಲ್ಲಿ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ಮಾತನಾಡಿ ಕಸದ ಬಗೆಗೆ ತೀವ್ರವಾದ ಜಾಗೃತಿಯನ್ನು ನಾವು ಜಾರಿಗೊಳಿಸಬೇಕಿದೆ. ಇಂದಿಗೂ ನಮ್ಮ ಮನೆ ಮುಂದಿನ ಕಸ ತೆಗೆಯುವುದಕ್ಕೆ ಮತ್ಯಾರೋ ಬರಬೇಕು ಎಂಬ ಭಾವನೆಯಿಂದ ಇರುವ ಜನ ಅನೇಕರಿದ್ದಾರೆ. ಎಳೆಯ ವಯಸ್ಸಿನಿಂದಲೇ ಮಕ್ಕಳಲ್ಲಿ ಕಸ ವಿಲೇವಾರಿಯ ಬಗೆಗೆ ಜಾಗೃತಿ ಮೂಡಿಸಿದಲ್ಲಿ ಅದು ಪರಿಣಾಮಕಾರಿಯೆನಿಸುತ್ತದೆ. ಸ್ವತಃ ಶ್ರಮದಾನದ ಮೂಲಕ ಕಸ ಹೆಕ್ಕುವ ಜತೆಗೆ ಆ ಬಗೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು ಅಗತ್ಯವಾಗಿ ಬೇಕಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮುಂದಿನ ಶತಮಾನಗಳನ್ನು ಆಳಲಿರುವ ಭಾರತವನ್ನು ನಾವು ಸುಂದರವಾಗಿ ರೂಪಿಸಬೇಕಿದೆ. ದೇಶ ನನ್ನದು ಎಂಬ ಭಾವನೆಯಿಂದ ವ್ಯವಹರಿಸಿದಾಗ ಕಸಕಡ್ಡಿಗಳನ್ನು ವಿಲೇವಾರಿ ಮಾಡಬೇಕೆಂಬ ಸ್ಪೂರ್ತಿ ತನ್ನಿಂದತಾನಾಗಿ ಮೂಡಿಬರುತ್ತದೆ. ದೇಶವನ್ನು ದೇವಿ ಎಂದು ಆರಾಧಿಸುವ ಜನ ನಾವು. ಆದರೆ ಆ ದೇವಿಯ ಮೈಯ ಮೇಲೆ ನಾವು ಮಾಡಬಾರದ ಅನಾಚಾರಗಳನ್ನು ಮಾಡುತ್ತಿರುವುದು ಅಕ್ಷಮ್ಯ. ನಮ್ಮನ್ನು ನಾವು ತಿದ್ದಿಕೊಳ್ಳುವುದು ತುಂಬಾ ಅಗತ್ಯ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ ಪ್ರಸಾದ ಎ, ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಐಕ್ಯುಎಸಿ ಘಟಕದ ಸಂಯೋಜಕ ಚಂದ್ರಕಾಂತ ಗೋರೆ, ರಾಷ್ಟ್ರೀಯ ಸೇವಾ ಯೋಜನೆಯ ನಿದೇಶಕ ಹರ್ಷಿತ್ ಪಿಂಡಿವನ, ಅಂಬಿಕಾ ವಿದ್ಯಾಲಯದ ಸ್ಕೌಟ್ ತಂಡ, ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಜಾಗೃತಿ ಅರಿವು ಕಾರ್ಯಕ್ರಮ ನಡೆಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago