Advertisement
ಸುದ್ದಿಗಳು

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

Share

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು.

Advertisement
Advertisement
Advertisement
Advertisement

ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕೃತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.

Advertisement

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕೃತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.

Advertisement

ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

12 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

16 hours ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

16 hours ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

16 hours ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago