Advertisement
ಸುದ್ದಿಗಳು

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

Share

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು.

ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕೃತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕೃತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.

ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

4 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

11 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago