Advertisement
ಸುದ್ದಿಗಳು

ಅಂಬಿಕಾ ವಿದ್ಯಾಲಯದಲ್ಲಿ ಪ್ರೇರಣಾ – 2022 | ಬೇಸಿಗೆ ಶಿಬಿರಕ್ಕೆ ಚಾಲನೆ | ದೇಸೀ ಜ್ಞಾನ, ಸಂಸ್ಕೃತಿ ಮಕ್ಕಳಲ್ಲಿ ಒಡಮೂಡಬೇಕು : ಡಾ.ಶ್ರೀಧರ ಎಚ್.ಜಿ |

Share

ಅಮೇರಿಕಾದಲ್ಲಿ ಅತಿಯಾದ ರಾಸಾಯನಿಕ ಗೊಬ್ಬರದಿಂದಾಗಿ ಮಣ್ಣು ಫಲವತ್ತತೆ ಕಳೆದುಕೊಂಡಿದೆ. ಹಾಗಾಗಿ ಭಾರತದ ಮಣ್ಣಿನ ಸತ್ವ ಹಾಗೂ ಇಲ್ಲಿ ತಯಾರಿಸುವ ದೇಸೀ ಸಾವಯವ ಗೊಬ್ಬರದ ಬಗೆಗೆ ಅಮೇರಿಕಾದ ತಂಡದಿಂದ ಅಧ್ಯಯನ ನಡೆಯುತ್ತಿದೆ. ಇಂತಹ ಶ್ರೇಷ್ಟ ಮಣ್ಣಿನ ಬಗೆಗಿನ ಅರಿವು ಮಕ್ಕಳಲ್ಲಿ ಒಡಮೂಡಬೇಕಾದದ್ದು ಅತ್ಯಂತ ಅಗತ್ಯ. ಆದ್ದರಿಂದ ರಜೆಯಲ್ಲಿ ಆಯೋಜಿಸುವ ಶಿಬಿರಗಳು ಇಂತಹ ಜ್ಞಾನವನ್ನು ನೀಡುವ ತಾಣಗಳಾಗಬೇಕು ಎಂದು ಪುತ್ತೂರಿನ ಹಿರಿಯ ಕನ್ನಡ ಪ್ರಾಧ್ಯಾಪಕ, ಸಾಹಿತಿ ಡಾ.ಶ್ರೀಧರ ಎಚ್.ಜಿ.ಹೇಳಿದರು.

ಅವರು ಪುತ್ತೂರು ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇಯಲ್ಲಿ ಸೋಮವಾರದಿಂದ ಪ್ರಾರಂಭಗೊಂಡ ಮೂರು ದಿನಗಳ ಬೇಸಿಗೆ ಶಿಬಿರ – ‘ಪ್ರೇರಣಾ 2022’ ಅನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನ ಕಾಲದಲ್ಲಿ ಅಜ್ಜನ ಮನೆಯೇ ಬೇಸಗೆ ಶಿಬಿರವಾಗಿತ್ತು. ರಜೆ ಸಿಕ್ಕಾಕ್ಷಣ ಅಲ್ಲಿಗೆ ತೆರಳಿ ತೋಟ ಗದ್ದೆಗಳಲ್ಲಿ ಓಡಾಡುವುದು, ಹಣ್ಣುಗಳನ್ನು ಕೊಯ್ದು ತಿನ್ನುವುದು, ಗಿಡಗಳಿಗೆ ನೀರುಣಿಸುವುದೇ ಮೊದಲಾದ ಚಟುವಟಿಕೆಗಳಿಂದ ನಿಸರ್ಗದ ಬಗೆಗೆ ಪರಿಕಲ್ಪನೆ ಬೆಳೆಯುತ್ತಿತ್ತು. ಅನೇಕಾನೇಕ ಪಾರಂಪರಿಕ ಜ್ಞಾನಗಳು ಅಂತಹ ಸಂದರ್ಭದಲ್ಲಿ ಒಡಮೂಡುತ್ತಿದ್ದವು. ಆದ್ದರಿಂದ ಇಂದಿನ ಮಕ್ಕಳೂ ಅಜ್ಜನಮನೆಗೆ ಹೋಗುವುದನ್ನು, ಅಲ್ಲಿ ಕಾಲ ಕಳೆಯುವುದನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದರಲ್ಲದೆ ಪ್ರಕೃತಿಯನ್ನು ಉಳಿಸುವುದಕ್ಕೆ ಸಂಸ್ಕೃತಿ ಅಗತ್ಯ. ಆಧುನಿಕ ಯುವದಲ್ಲಿ ಪ್ರಕೃತಿಗೆ ಮಾರಕರಾಗಿ ವ್ಯವಹರಿಸುತ್ತಿದ್ದೇವೆ. ಆದ್ದರಿಂದ ನಾವೆಲ್ಲರೂ ನೆಲ ಜಲದ ಅರಿವನ್ನು ಹೊಂದಿ ಮುಂದುವರಿಯಬೇಕು ಎಂದು ತಿಳಿಸಿದರು.

ಪ್ರಸ್ತಾವನೆಗೈದ ಅಂಬಿಕಾ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ಡಿ, ಕಲಿಕೆ ಅನ್ನುವುದು ತುಂಬಾ ವಿಶಾಲ ಅರ್ಥವನ್ನು ಹೊಂದಿದೆ. ಎಷ್ಟು ಹೊತ್ತು ಮಲಗಬೇಕು, ಯಾವಾಗ ಏಳಬೇಕು ಎಂಬುದೂ ಕಲಿಕೆಯ ಒಂದು ಭಾಗವೇ ಆಗಿದೆ. ಮಕ್ಕಳಿಗೆ ದೇಶದ ಹಿರಿಮೆ ಗರಿಮೆಗಳನ್ನು ತಿಳಿಸುವ, ಸಂಸ್ಕೃತಿಯನ್ನು ಪರಿಚಯಿಸುವ ನೆಲೆಯಲ್ಲಿ ‘ಪ್ರೇರಣಾ 2022’ ಆಯೋಜನೆಗೊಂಡಿದೆ. ಅನೇಕ ಮಂದಿ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಲ್ಲಿ ವಿನೂತನ ಪರಿಕಲ್ಪನೆಯನ್ನು ಮೂಡಿಸಲಿದ್ದಾರೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ಮಕ್ಕಳು ಎಳವೆಯಿಂದಲೇ ಹೊಸ ಹೊಸ ವಿಚಾರಗಳನ್ನು ಅರಿತುಕೊಂಡು ಬೆಳೆಯಬೇಕು. ಸಂಪನ್ಮೂಲ ವ್ಯಕ್ತಿಗಳು ಹೇಳಿದ್ದನ್ನು ಕೇವಲ ಕೇಳಿಸಿಕೊಳ್ಳುವುದಷ್ಟೇ ಅಲ್ಲದೆ ಬರೆದಿಟ್ಟು ಬದುಕಿನಲ್ಲಿ ಅಳವಡಿಸುವ ನೆಲೆಯಲ್ಲಿ ಕಾರ್ಯತತ್ಪರರಾಗಬೇಕು. ತನ್ಮೂಲಕ ಶಿಬಿರದ ಸದ್ಬಳಕೆ ಆಗಬೇಕು ಎಂದು ನುಡಿದರು. ವೇದಿಕೆಯಲ್ಲಿ ಶಿಬಿರದ ಸಂಯೋಜಕ ಸತೀಶ್ ಇರ್ದೆ ಉಪಸ್ಥಿತರಿದ್ದರು.

ಎಂಟನೆಯ ತರಗತಿ ವಿದ್ಯಾರ್ಥಿ ಆತ್ರೇಯ ಪ್ರಾರ್ಥಿಸಿ, ಏಳನೆಯ ತರಗತಿ ವಿದ್ಯಾರ್ಥಿ ಆಕಾಶ್ ಸ್ವಾಗತಿಸಿದರು. ಆರನೆಯ ತರಗತಿ ವಿವಿಕ್ತ ವಂದಿಸಿ, ಪ್ರಿಯಾಂಶು ಕಾರ್ಯಕ್ರಮ ನಿರ್ವಹಿಸಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

4 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

14 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

21 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago