ಕಾವ್ಯಗಳ ಶಕ್ತಿ ಅನಂತವಾದದ್ದು. ಅನೇಕ ಬಹುಶ್ರುತ ಸಾಧಕರು ಕಾವ್ಯಗಳ ಮೂಲಕ ಅತ್ಯುತ್ಕøಷ್ಟ ಸಂದೇಶವನ್ನು ಸಮಾಜಕ್ಕೆ ನೀಡಿದ್ದಾರೆ. ಎಂದೋ ಮೂಡಿದ ಕಾವ್ಯಗಳು ಇಂದಿಗೂ ಸಮಾಜಕ್ಕೆ ಮಾರ್ಗದರ್ಶಿಗಳಾಗಿ ನಮ್ಮ ಮುಂದಿವೆ. ಅಂತಹ ಉತ್ಕೃಷ್ಟ ಕಾವ್ಯ ಪ್ರಪಂಚವನ್ನು ಸೃಷ್ಟಿಸಿದವರಲ್ಲಿ ಆದಿ ಶಂಕರಾಚಾರ್ಯರೂ ಒಬ್ಬರು ಎಂದು ಅಂಬಿಕಾ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ವಿನಾಯಕ ಭಟ್ಟ ಗಾಳಿಮನೆ ಹೇಳಿದರು.
ಅವರು ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ತೃತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿಗಳು ಆಯೋಜಿಸುವ ಅನುಪಮ ಪ್ರತಿಭಾ ವೇದಿಕೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ‘ನನ್ನ ಇಷ್ಟದ ಹಾಡು’ ವಿಷಯದ ಕುರಿತಾಗಿ ಶುಕ್ರವಾರ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಯಾವುದಾದರೂ ಒಂದು ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸುವ ಹಾಗೂ ಅವಕಾಶ ಕಲ್ಪಿಸಿಕೊಡುವ ವ್ಯವಸ್ಥೆ ಇರಬೇಕು. ಇದುವರೆಗೂ ವೇದಿಕೆಯೇರದವರೂ ವೇದಿಕೆಗೆ ಬರುವಂತಾಗುವುದೇ ಕಾರ್ಯಕ್ರಮದ ನಿಜವಾದ ಸಾರ್ಥಕ್ಯ. ಆ ನೆಲೆಯಲ್ಲಿ ಅನುಪಮ ವೇದಿಕೆ ಕಾರ್ಯನಿರ್ವಹಿಸುತ್ತದೆ ಎಂದರು.
01.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 2.1/2…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…