ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ

January 25, 2025
6:57 AM
ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ಸಹಕಾರ ಸಚಿವ ಅಮಿತ್‌ ಶಾ ಹೇಳಿದರು.

ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…..ಮುಂದೆ ಓದಿ….

Advertisement
Advertisement
Advertisement
Advertisement
Advertisement

ನಾಸಿಕ್ ನ ಮಾಲೆಗಾಂವ್ ನಲ್ಲಿ ಸಹಕಾರ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಸಹಕಾರದಿಂದ ಸಮೃದ್ಧಿ ಎಂಬುದು ಸರ್ಕಾರದ ನೀತಿಯಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸ್ವಾತಂತ್ರ್ಯದ 75 ವರ್ಷಗಳ ನಂತರ ಪ್ರಥಮ ಬಾರಿಗೆ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಈ ಮೂಲಕ ಆತ್ಮ ನಿರ್ಭರತೆ ಪರಿಕಲ್ಪನೆಗೆ ಉತ್ತೇಜನ ನೀಡಿದೆ. ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮಣ್ಣಿನ ಪರೀಕ್ಷೆ ಯೋಜನೆಯಿಂದ ಫಲವತ್ತತೆ ಹೆಚ್ಚಳವಾಗಿದ್ದು, ರೈತರಿಗೆ ಅನುಕೂಲವಾಗಿದೆ. ಸಾವಯವ ಉತ್ಪನ್ನಗಳ ನಿಗದಿತ ದರಕ್ಕೆ ಮಾರಾಟ ಮಾಡಲು ಪ್ರಮಾಣಪತ್ರ ಅತ್ಯಗತ್ಯವಾಗಿದ್ದು, ಇದನ್ನು ರೈತರಿಗೆ ಒದಗಿಸಲು ಸಕಲ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಮಾರುಕಟ್ಟೆಗೆ ಪ್ರಮಾಣೀಕೃತ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು. ದೇಶೀಯ ಬೀಜ ಸಂರಕ್ಷಣೆ, ಹೆಚ್ಚು ಇಳುವರಿ ನೀಡುವ ಬೀಜ ಉತ್ಪಾದನೆ, ಮೀನುಗಾರಿಕೆ ಮತ್ತು ಸಾವಯವ ಕೃಷಿ ವಿಸ್ತರಣೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರು ಪಂಚಗವ್ಯ ಮತ್ತು ದೇಶೀ ಹಸುಗಳ ಗೊಬ್ಬರ ಬಳಕೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಇದರಿಂದ ಗೋವುಗಳ ರಕ್ಷಣೆಯೂ ಆಗಲಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಎಲೆಚುಕ್ಕಿ ರೋಗ | ಸರ್ಕಾರದಿಂದ ಪ್ರತ್ಯೇಕ ಪರಿಹಾರ ಇಲ್ಲ | ಡಿಸೀಸ್‌ ಫಾರ್ಕಾಸ್ಟ್‌ ಮಾಡಲು ವಿಧಾನ ಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಒತ್ತಾಯ |
March 4, 2025
3:30 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ
March 4, 2025
2:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |
March 4, 2025
12:55 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |
March 3, 2025
11:46 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror