Advertisement
ಸುದ್ದಿಗಳು

ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ

Share

ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…..ಮುಂದೆ ಓದಿ….

ನಾಸಿಕ್ ನ ಮಾಲೆಗಾಂವ್ ನಲ್ಲಿ ಸಹಕಾರ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಸಹಕಾರದಿಂದ ಸಮೃದ್ಧಿ ಎಂಬುದು ಸರ್ಕಾರದ ನೀತಿಯಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸ್ವಾತಂತ್ರ್ಯದ 75 ವರ್ಷಗಳ ನಂತರ ಪ್ರಥಮ ಬಾರಿಗೆ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಈ ಮೂಲಕ ಆತ್ಮ ನಿರ್ಭರತೆ ಪರಿಕಲ್ಪನೆಗೆ ಉತ್ತೇಜನ ನೀಡಿದೆ. ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮಣ್ಣಿನ ಪರೀಕ್ಷೆ ಯೋಜನೆಯಿಂದ ಫಲವತ್ತತೆ ಹೆಚ್ಚಳವಾಗಿದ್ದು, ರೈತರಿಗೆ ಅನುಕೂಲವಾಗಿದೆ. ಸಾವಯವ ಉತ್ಪನ್ನಗಳ ನಿಗದಿತ ದರಕ್ಕೆ ಮಾರಾಟ ಮಾಡಲು ಪ್ರಮಾಣಪತ್ರ ಅತ್ಯಗತ್ಯವಾಗಿದ್ದು, ಇದನ್ನು ರೈತರಿಗೆ ಒದಗಿಸಲು ಸಕಲ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಮಾರುಕಟ್ಟೆಗೆ ಪ್ರಮಾಣೀಕೃತ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು. ದೇಶೀಯ ಬೀಜ ಸಂರಕ್ಷಣೆ, ಹೆಚ್ಚು ಇಳುವರಿ ನೀಡುವ ಬೀಜ ಉತ್ಪಾದನೆ, ಮೀನುಗಾರಿಕೆ ಮತ್ತು ಸಾವಯವ ಕೃಷಿ ವಿಸ್ತರಣೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರು ಪಂಚಗವ್ಯ ಮತ್ತು ದೇಶೀ ಹಸುಗಳ ಗೊಬ್ಬರ ಬಳಕೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಇದರಿಂದ ಗೋವುಗಳ ರಕ್ಷಣೆಯೂ ಆಗಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ

ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…

13 hours ago

ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…

13 hours ago

ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ

ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…

13 hours ago

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ

ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…

14 hours ago

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

1 day ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

1 day ago