Advertisement
ಸುದ್ದಿಗಳು

ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ

Share

ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…..ಮುಂದೆ ಓದಿ….

ನಾಸಿಕ್ ನ ಮಾಲೆಗಾಂವ್ ನಲ್ಲಿ ಸಹಕಾರ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಸಹಕಾರದಿಂದ ಸಮೃದ್ಧಿ ಎಂಬುದು ಸರ್ಕಾರದ ನೀತಿಯಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸ್ವಾತಂತ್ರ್ಯದ 75 ವರ್ಷಗಳ ನಂತರ ಪ್ರಥಮ ಬಾರಿಗೆ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಈ ಮೂಲಕ ಆತ್ಮ ನಿರ್ಭರತೆ ಪರಿಕಲ್ಪನೆಗೆ ಉತ್ತೇಜನ ನೀಡಿದೆ. ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮಣ್ಣಿನ ಪರೀಕ್ಷೆ ಯೋಜನೆಯಿಂದ ಫಲವತ್ತತೆ ಹೆಚ್ಚಳವಾಗಿದ್ದು, ರೈತರಿಗೆ ಅನುಕೂಲವಾಗಿದೆ. ಸಾವಯವ ಉತ್ಪನ್ನಗಳ ನಿಗದಿತ ದರಕ್ಕೆ ಮಾರಾಟ ಮಾಡಲು ಪ್ರಮಾಣಪತ್ರ ಅತ್ಯಗತ್ಯವಾಗಿದ್ದು, ಇದನ್ನು ರೈತರಿಗೆ ಒದಗಿಸಲು ಸಕಲ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಮಾರುಕಟ್ಟೆಗೆ ಪ್ರಮಾಣೀಕೃತ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು. ದೇಶೀಯ ಬೀಜ ಸಂರಕ್ಷಣೆ, ಹೆಚ್ಚು ಇಳುವರಿ ನೀಡುವ ಬೀಜ ಉತ್ಪಾದನೆ, ಮೀನುಗಾರಿಕೆ ಮತ್ತು ಸಾವಯವ ಕೃಷಿ ವಿಸ್ತರಣೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರು ಪಂಚಗವ್ಯ ಮತ್ತು ದೇಶೀ ಹಸುಗಳ ಗೊಬ್ಬರ ಬಳಕೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಇದರಿಂದ ಗೋವುಗಳ ರಕ್ಷಣೆಯೂ ಆಗಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

6 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

23 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago