Advertisement
ಸುದ್ದಿಗಳು

ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ

Share

ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…..ಮುಂದೆ ಓದಿ….

ನಾಸಿಕ್ ನ ಮಾಲೆಗಾಂವ್ ನಲ್ಲಿ ಸಹಕಾರ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಸಹಕಾರದಿಂದ ಸಮೃದ್ಧಿ ಎಂಬುದು ಸರ್ಕಾರದ ನೀತಿಯಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸ್ವಾತಂತ್ರ್ಯದ 75 ವರ್ಷಗಳ ನಂತರ ಪ್ರಥಮ ಬಾರಿಗೆ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಈ ಮೂಲಕ ಆತ್ಮ ನಿರ್ಭರತೆ ಪರಿಕಲ್ಪನೆಗೆ ಉತ್ತೇಜನ ನೀಡಿದೆ. ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮಣ್ಣಿನ ಪರೀಕ್ಷೆ ಯೋಜನೆಯಿಂದ ಫಲವತ್ತತೆ ಹೆಚ್ಚಳವಾಗಿದ್ದು, ರೈತರಿಗೆ ಅನುಕೂಲವಾಗಿದೆ. ಸಾವಯವ ಉತ್ಪನ್ನಗಳ ನಿಗದಿತ ದರಕ್ಕೆ ಮಾರಾಟ ಮಾಡಲು ಪ್ರಮಾಣಪತ್ರ ಅತ್ಯಗತ್ಯವಾಗಿದ್ದು, ಇದನ್ನು ರೈತರಿಗೆ ಒದಗಿಸಲು ಸಕಲ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಮಾರುಕಟ್ಟೆಗೆ ಪ್ರಮಾಣೀಕೃತ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು. ದೇಶೀಯ ಬೀಜ ಸಂರಕ್ಷಣೆ, ಹೆಚ್ಚು ಇಳುವರಿ ನೀಡುವ ಬೀಜ ಉತ್ಪಾದನೆ, ಮೀನುಗಾರಿಕೆ ಮತ್ತು ಸಾವಯವ ಕೃಷಿ ವಿಸ್ತರಣೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರು ಪಂಚಗವ್ಯ ಮತ್ತು ದೇಶೀ ಹಸುಗಳ ಗೊಬ್ಬರ ಬಳಕೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಇದರಿಂದ ಗೋವುಗಳ ರಕ್ಷಣೆಯೂ ಆಗಲಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago