Advertisement
ಸುದ್ದಿಗಳು

ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ

Share

ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ರೈತರ ಆದಾಯ ಹೆಚ್ಚಳಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಹಕಾರ ಮತ್ತು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…..ಮುಂದೆ ಓದಿ….

ನಾಸಿಕ್ ನ ಮಾಲೆಗಾಂವ್ ನಲ್ಲಿ ಸಹಕಾರ ಸಮಾವೇಶಕ್ಕೆ ಚಾಲನೆ ನೀಡಿದ ಅವರು, ಸಹಕಾರದಿಂದ ಸಮೃದ್ಧಿ ಎಂಬುದು ಸರ್ಕಾರದ ನೀತಿಯಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸ್ವಾತಂತ್ರ್ಯದ 75 ವರ್ಷಗಳ ನಂತರ ಪ್ರಥಮ ಬಾರಿಗೆ ಸಹಕಾರ ಸಚಿವಾಲಯ ಸ್ಥಾಪಿಸಿದ್ದು, ಈ ಮೂಲಕ ಆತ್ಮ ನಿರ್ಭರತೆ ಪರಿಕಲ್ಪನೆಗೆ ಉತ್ತೇಜನ ನೀಡಿದೆ. ಸಹಕಾರ ಸಚಿವಾಲಯದ ಅಡಿ ಸಾವಯವ ಕೃಷಿ ಉತ್ಪನ್ನಗಳ ಪ್ಯಾಕೇಜಿಂಗ್, ಮಾರ್ಕೆಟಿಂಗ್ ಮತ್ತು ಬ್ರಾಡಿಂಗ್ ಗೆ ನೆರವು ನೀಡಲಾಗುತ್ತಿದೆ. ಇದಕ್ಕಾಗಿ ಭಾರತ ಸಾವಯವ ಸಹಕಾರ ನಿಗಮ ಎಂಬ ಬಹುರಾಷ್ಟ್ರೀಯ ಸಂಸ್ಥೆ ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಮಣ್ಣಿನ ಪರೀಕ್ಷೆ ಯೋಜನೆಯಿಂದ ಫಲವತ್ತತೆ ಹೆಚ್ಚಳವಾಗಿದ್ದು, ರೈತರಿಗೆ ಅನುಕೂಲವಾಗಿದೆ. ಸಾವಯವ ಉತ್ಪನ್ನಗಳ ನಿಗದಿತ ದರಕ್ಕೆ ಮಾರಾಟ ಮಾಡಲು ಪ್ರಮಾಣಪತ್ರ ಅತ್ಯಗತ್ಯವಾಗಿದ್ದು, ಇದನ್ನು ರೈತರಿಗೆ ಒದಗಿಸಲು ಸಕಲ ಕ್ರಮ ಕೈಗೊಳ್ಳಲಾಗಿದೆ. ಜಾಗತಿಕ ಮಾರುಕಟ್ಟೆಗೆ ಪ್ರಮಾಣೀಕೃತ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ನೆರವು ನೀಡಲಾಗುತ್ತಿದೆ ಎಂದು ವಿವರಿಸಿದರು. ದೇಶೀಯ ಬೀಜ ಸಂರಕ್ಷಣೆ, ಹೆಚ್ಚು ಇಳುವರಿ ನೀಡುವ ಬೀಜ ಉತ್ಪಾದನೆ, ಮೀನುಗಾರಿಕೆ ಮತ್ತು ಸಾವಯವ ಕೃಷಿ ವಿಸ್ತರಣೆಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ರೈತರು ಪಂಚಗವ್ಯ ಮತ್ತು ದೇಶೀ ಹಸುಗಳ ಗೊಬ್ಬರ ಬಳಕೆಯಿಂದ ಹೆಚ್ಚು ಇಳುವರಿ ಪಡೆಯಬಹುದಾಗಿದೆ. ಇದರಿಂದ ಗೋವುಗಳ ರಕ್ಷಣೆಯೂ ಆಗಲಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

6 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

8 hours ago

ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು

ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…

14 hours ago

2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?

2026ರಲ್ಲಿ ಎಲ್‌ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್‌ನಿನೊ" ಆಗುವ…

24 hours ago

ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು

ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…

1 day ago

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

1 day ago