ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಭಾರತೀಯ ರೈಲ್ವೆ ತನ್ನ ಹೋರಾಟವನ್ನು ಮಾಡುತ್ತಲೇ ಬಂದಿದೆ ಹಾಗೂ ಈ ಹೋರಾಟದಲ್ಲಿ ಮತ್ತೊಂದು ಹೆಜ್ಜೆಯನ್ನು ಇರಿಸುವ ಆಲೋಚನೆಯನ್ನು ಮಾಡಿದೆ.
ಹೌದು, ಕರೋನವೈರಸ್ ಸಾಂಕ್ರಾಮಿಕ ವಿರುದ್ಧ ಪಿಯುಷ್ ಗೋಯಲ್ ನೇತೃತ್ವದ ಭಾರತೀಯ ರೈಲ್ವೆ ಜಾನ್ ಆಂಡೋಲನ್ ಜೊತೆ ಸೇರಿಕೊಂಡಿದೆ. ಜಾಗೃತಿ ಮೂಡಿಸಲು ಮತ್ತು ಮಾರಣಾಂತಿಕ ಸೋಂಕು ಹರಡದಂತೆ ತಡೆಯಲು, ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿವಿಧ ಸ್ಥಳಗಳಲ್ಲಿ ಬ್ಯಾನರ್ಗಳು / ಪೋಸ್ಟರ್ಗಳನ್ನು ಅಳವಡಿಸಲಾಗಿದೆ. ಅದರೊಂದಿಗೆ ಇದೀಗ, ಬಾಲಿವುಡ್ ಸೂಪರ್ಸ್ಟಾರ್ ಅಮಿತಾಬ್ ಬಚ್ಚನ್ ಕೂಡ ಅವರೊಂದಿಗೆ ಕೈಜೋಡಿಸಿ, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲು ಜನರನ್ನು ಪ್ರೋತ್ಸಾಹಿಸಲು ಮುಂದಾಗಿದ್ದಾರೆ.
ಕೆಮ್ಮು, ಜ್ವರ ಅಥವಾ ಉಸಿರಾಟದ ತೊಂದರೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆ 1075 ಗೆ ಕರೆ ಮಾಡಿ ಎಂದು ನಟ ಅಮಿತಾಭ್ ಬಚ್ಚನ್ ಸಾರ್ವಜನಿಕರಲ್ಲಿ ಕೋರಿದರು. ಅದರೊಂದಿಗೆ ಸಾಂಕ್ರಾಮಿಕ ರೋಗ ಹರಡದಂತೆ ತಪ್ಪಿಸಲು ಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡುತ್ತಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…