Advertisement
ಸುದ್ದಿಗಳು

ಪುತ್ತೂರಿನಲ್ಲಿ ಗೃಹ ಸಚಿವ ಅಮಿತ್‌ ಶಾ | ದೇಶದಲ್ಲಿ ಸಹಕಾರಿ ಕ್ಷೇತ್ರದ ಮೂಲಕ ರೈತರ ನೆರವಿಗೆ ಸರ್ಕಾರ ಬದ್ಧ |

Share

ದೇಶದಲ್ಲಿ ಸಹಕಾರಿ ಶಕ್ತಿಯನ್ನು ನಾವು ಗಮನಿಸಿದ್ದೇವೆ. ಮುಂದಿನ ದಿನಗಳಲ್ಲಿ  ಸಹಕಾರ ಕ್ಷೇತ್ರದ ಮೂಲಕ ರೈತರ ಸೇವೆ ಮಾಡಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿಯೇ ಈ ಬಾರಿಯ ಬಜೆಟ್‌ ನಲ್ಲಿ ಸಹಕಾರಿ ಕ್ಷೇತ್ರಕ್ಕೂ ಅನುದಾನ ನೀಡಲಾಗಿದೆ ಎಂದು ಕೇಂದ್ರ ಗೃಹ ಸಚಿವ, ಸಹಕಾರಿ ಸಚಿವ ಅಮಿತ್‌ ಶಾ ಹೇಳಿದರು.

ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್‌ ಶಾ, ಸಹಕಾರಿ ಕ್ಷೇತ್ರದ ಶಕ್ತಿ ಅಪಾರವಾಗಿದೆ. ನೀವಿಲ್ಲಿ ಬೆಳೆದ ಅಡಿಕೆಯನ್ನ ಗುಜರಾತಿನ ನಾವು ತಿನ್ನುತ್ತೇವೆ. ಸಹಕಾರಿ ಕ್ಷೇತ್ರವು ಈ ಕೊಂಡಿಯನ್ನು ಸೃಷ್ಟಿಸಿದೆ. ಸಹಕಾರಿ ಕ್ಷೇತ್ರಕ್ಕೆ ಕ್ಯಾಂಪ್ಕೋ ಮಾದರಿಯಾಗಿದೆ. ಕ್ಯಾಂಪ್ಕೋ ಬೆಳವಣಿಗೆ ನೋಡಿ ಈ ದೇಶದಲ್ಲಿ ಸಹಕಾರಿ ಕ್ಷೇತ್ರದ ಶಕ್ತಿಯನ್ನು ನಾನು ಗಮನಿಸಿದ್ದೇನೆ, ಈ ಮೂಲಕ ಸಹಕಾರಿ ಶಕ್ತಿ ತಿಳಿಯುತ್ತದೆ ಎಂದು ಅಮಿತ್‌ ಶಾ  ಹೇಳಿದರು. ವಾರಣಾಸಿ ಸುಬ್ರಾಯ ಭಟ್‌ ನೇತೃತ್ವದಲ್ಲಿ ಈ ಸಂಸ್ಥೆಯು 3000  ಸದಸ್ಯರಿಂದ ಆರಂಭವಾಗಿದೆ, ಇಂದು ಒಂದು ಲಕ್ಷ ಸದಸ್ಯರನ್ನು ಹೊಂದಿದೆ,  ಮೂರು ಸಾವಿರ ಕೋಟಿ ವ್ಯವಹಾರ ಆಗುತ್ತದೆ ಎನ್ನುವುದು  ಸಹಕಾರಿ ಶಕ್ತಿಯನ್ನು ನೆನೆಪಿಸುತ್ತದೆ ಎಂದರು. ಸರ್ಕಾರವು ಸಹಕಾರಿ ಸಂಘದ ಮೂಲಕ ರೈತರ ಸೇವೆ ಮಾಡಲು ಸಿದ್ಧವಾಗಿದೆ. ಇದಕ್ಕಾಗಿಯೇ ಈ ಬಜೆಟ್‌ ನಲ್ಲಿ ಮೋದಿ ಅವರು ಪಂಚಾಯತ್‌ ಮಟ್ಟದಲ್ಲಿ ಸಹಕಾರಿ ಪ್ಯಾಕ್ಸ್ ಸ್ಥಾಪನೆಗೆ ಸಿದ್ದವಾಗಿದೆ ಎಂದರು. ಕ್ಯಾಂಪ್ಕೋ ಕೃಷಿ ಮಾಲ್‌ಗೆ ಶಂಕುಸ್ಥಾಪನೆಯಾಗಿದೆ, ಈ ಮೂಲಕ ಕೃಷಿ ವಸ್ತು, ಗೊಬ್ಬರ, ಯಂತ್ರಗಳು ಇಲ್ಲಿ ಲಭ್ಯವಾಗಲಿದೆ, ದೇಶದ ಎಲ್ಲಾ ಕಡೆಗಳಲ್ಲೂ ಇದೇ ಮಾದರಿಯಲ್ಲಿ ಸಂಸ್ಥೆ ತೆರೆಯುವ ಯೋಜನೆ ಇದೆ ಎಂದರು.  ಅಡಿಕೆ ಮತ್ತು ಕೋಕೋ ಸಂಸ್ಥೆಗೆ 50 ವರ್ಷ ತುಂಬಿದೆ ಎನ್ನುವುದೇ ಈ ಸಂಘದ   ಪ್ರಾಮಾಣಿಕತೆಗೆ ನೀಡಿದ ಸರ್ಟಿಫಿಕೇಟ್‌ ಎಂದು ಅಮಿತ್‌ ಶಾ ಹೇಳಿದರು.

ಬಿಜೆಪಿ ಸರ್ಕಾರವು ಬಡವರಿಗೆ ನೆರವಾಗುತ್ತಿದೆ, ಹಲವು ಯೋಜನೆ ತಂದಿದೆ. ಸಮಗ್ರ ದೇಶದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡುತ್ತಿದೆ, ದೇಶದ ಸುರಕ್ಷತೆ ಕಡೆಗೂ ಗಮನಹರಿಸಿದೆ ಎಂದರು.  ಬಿಜೆಪಿಗೆ ಮತ ನೀಡಿದರೆ ದೇಶ ಭಕ್ತರಿಗೆ, ರಾಣಿ ಅಬ್ಬಕ್ಕ ಮತ ನೀಡಿದಂತೆ. ಕಾಂಗ್ರೆಸ್‌ ಗೆ  ಮತ ನೀಡಿದರೆ ಟಿಪ್ಪುವಿಗೆ ಮತ ನೀಡಿದಂತೆ. ಕಾಂಗ್ರೆಸ್‌ ಭ್ರಷ್ಟ ಸರ್ಕಾರವಾಗಿದೆ, ಜನತಾದಳ – ಕಾಂಗ್ರೆಸ್‌ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬಾರದು ಎಂದು ಸಂಕಲ್ಪಿಸಬೇಕು ಎಂದು ಅಮಿತ್‌ ಶಾ ಹೇಳಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

15 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago