ಕರ್ನಾಟಕ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ

December 28, 2022
9:49 PM

ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ ಡಿ. 29ರಂದು ಹೊಸದಿಲ್ಲಿಯಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ರಾತ್ರಿ 10 ಗಂಟೆಗೆ ಯಲಹಂಕದ ವಾಯುನೆಲೆಗೆ ಆಗಮಿಸಿ, ಬೆಂಗಳೂರಿನ ರೇಸ್‍ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಡಿ. 30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15ರ ವರೆಗೆ ಹೊಟೇಲ್‍ನಲ್ಲಿ ಉಪಹಾರದೊಂದಿಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿರುವ ಅವರು, ಮಧ್ಯಾಹ್ನ 1.35ಕ್ಕೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಮಂಡ್ಯ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ.

ಅನಂತರ, ಮಧ್ಯಾಹ್ನ 3.30ಕ್ಕೆ ಗೆಜ್ಜಲಗೆರೆಯಲ್ಲಿ ಸ್ಥಾಪಿಸಿರುವ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಿ, ಅಂದು ರಾತ್ರಿ 8 ರಿಂದ 9.30ರವರೆಗೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror