ಕೇಂದ್ರ ಗೃಹಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಡಿ. 29ರಿಂದ 31ರವರೆಗೆ ಮೂರು ದಿನಗಳ ಕಾಲ ಕರ್ನಾಟಕ ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದು, ಗುರುವಾರದಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ವಿಶೇಷ ವಿಮಾನದ ಮೂಲಕ ಡಿ. 29ರಂದು ಹೊಸದಿಲ್ಲಿಯಿಂದ ಕರ್ನಾಟಕ ರಾಜ್ಯಕ್ಕೆ ಆಗಮಿಸಲಿರುವ ಅಮಿತ್ ಶಾ, ರಾತ್ರಿ 10 ಗಂಟೆಗೆ ಯಲಹಂಕದ ವಾಯುನೆಲೆಗೆ ಆಗಮಿಸಿ, ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಖಾಸಗಿ ಹೊಟೇಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಡಿ. 30ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 12.15ರ ವರೆಗೆ ಹೊಟೇಲ್ನಲ್ಲಿ ಉಪಹಾರದೊಂದಿಗೆ ರಾಜ್ಯ ಬಿಜೆಪಿ ಪ್ರಮುಖ ನಾಯಕರನ್ನು ಭೇಟಿ ಮಾಡಿ ಹಲವಾರು ವಿಷಯಗಳ ಕುರಿತು ಚರ್ಚೆ ನಡೆಸಲಿರುವ ಅವರು, ಮಧ್ಯಾಹ್ನ 1.35ಕ್ಕೆ ಮಂಡ್ಯ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.45ಕ್ಕೆ ಮಂಡ್ಯ ಸರಕಾರಿ ಬಾಲಕರ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಅಮಿತ್ ಶಾ ಭಾಷಣ ಮಾಡಲಿದ್ದಾರೆ.
ಅನಂತರ, ಮಧ್ಯಾಹ್ನ 3.30ಕ್ಕೆ ಗೆಜ್ಜಲಗೆರೆಯಲ್ಲಿ ಸ್ಥಾಪಿಸಿರುವ ಮೆಗಾ ಡೈರಿಯನ್ನು ಉದ್ಘಾಟನೆ ಮಾಡಲಿದ್ದಾರೆ. ಸಂಜೆ 5.45ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಸಹಕಾರ ವಲಯದ ಸಮ್ಮೇಳನದಲ್ಲಿ ಭಾಗಿಯಾಗಿ, ಅಂದು ರಾತ್ರಿ 8 ರಿಂದ 9.30ರವರೆಗೆ ಬಿಜೆಪಿ ಪಕ್ಷದ ನಾಯಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…