Advertisement
ಸುದ್ದಿಗಳು

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ನಾಯಕ ಅಮಿತ್‌ ಶಾ | ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ | ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೂ ನಿಗಾ ? |

Share

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇದೀಗ ಅಮಿತ್‌ ಶಾ ಆಗಮನದ ಜೊತೆಗೆ ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಈ ನಡುವೆಯೇ ಸಚಿವ ಸಂಪುಟ ವಿಸ್ತರಣೆ, ಸಚಿವರ ಕೈ ಬಿಡುವ ಉದ್ದೇಶ, ನೂತನ ನಾಯಕತ್ವದ ಬಗ್ಗೆಯೂ ಕುತೂಹಲ ಮೂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೂ ನಿಗಾ ಇದ್ದು.  ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಈ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಮುಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ಹಾಗೂ ವಂಶಾಡಳಿತ ರಾಜಕಾರಣದ ಕುರಿತಂತೆ ನೀಡಿದ್ದ ಹೇಳಿಕೆಯೊಂದು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.  ಇದೀಗ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ, ಮುಂಬರುವ ಚುನಾವಣೆಗೆ ಸಂಘಟನಾತ್ಮಕ ಸಿದ್ಧತೆ ಸೇರಿದಂತೆ ಬಿಜೆಪಿಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿರುವಾಗಲೇ ಸಂತೋಷ್ ಅವರ ಹೇಳಿಕೆಗೆ ಪುಷ್ಟಿ ನೀಡಿತ್ತು.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆಯೂ ಬಹುದಿನಗಳಿಂದ ಇದೆ. ಸದ್ಯ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಪ್ರಭಾವ ಸಾಕಷ್ಟಿಲ್ಲ ಎನ್ನುವ ಅಭಿಪ್ರಾಯ ಇದ್ದು. ಇದೀಗ ಈ ಸ್ಥಾನಕ್ಕೆ ಹಿಂದೂವಾದಿಯನ್ನೇ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ವರಿಷ್ಟರು ಚಿಂತನೆ ನಡೆಸಿದ್ದರು ಎನ್ನುವುದು  ಮಾಧ್ಯಮಗಳ ವರದಿ. ಇದರ ಜೊತೆಗೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪ್ರಮುಖ ಹುದ್ದೆ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.  ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವೇಳೆಯೂ ಕೆಲವು ಸಚಿವರ ಕೈಬಿಡುವುದು  ಹಾಗೂ ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ. ಭ್ರಷ್ಟಾಚಾರ, ಬೆಂಬಲಿಗರಿಗೆ ಮಣೆ, ಸ್ವಜನ ಪಕ್ಷಪಾತ ಸೇರಿದಂತೆ ಇತರ ಸಂಗತಿಗಳ ಬಗ್ಗೆ ವರಿಷ್ಠರು ಗುಪ್ತವಾಗಿ ಮಾಹಿತಿ ಸಂಗ್ರಹಿಸಿದ್ದು ಇದೆಲ್ಲಾ ಈಗ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂದಿನ ಚುನಾವಣೆಯನ್ನು ಗುರಿಯಾಗಿಸಿ ಈ ಬದಲಾವಣೆಗಳು ಆರಂಭವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

6 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

7 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

11 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

11 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

11 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

11 hours ago