Advertisement
ಸುದ್ದಿಗಳು

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ನಾಯಕ ಅಮಿತ್‌ ಶಾ | ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ | ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೂ ನಿಗಾ ? |

Share

ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಮುಖಂಡ ಅಮಿತ್ ಶಾ ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಇದೀಗ ಅಮಿತ್‌ ಶಾ ಆಗಮನದ ಜೊತೆಗೆ ರಾಜ್ಯ ರಾಜಕೀಯಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಭಾರೀ ಚರ್ಚೆ ಆರಂಭವಾಗಿದೆ. ಈ ನಡುವೆಯೇ ಸಚಿವ ಸಂಪುಟ ವಿಸ್ತರಣೆ, ಸಚಿವರ ಕೈ ಬಿಡುವ ಉದ್ದೇಶ, ನೂತನ ನಾಯಕತ್ವದ ಬಗ್ಗೆಯೂ ಕುತೂಹಲ ಮೂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡೆಗೂ ನಿಗಾ ಇದ್ದು.  ಈ ಬೆಳವಣಿಗೆಯು ಇದೀಗ ಎಲ್ಲರಲ್ಲೂ ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಈ ಹಿಂದೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, ಮುಂದಿನ ಚುನಾವಣೆಯ ಅಭ್ಯರ್ಥಿ ಆಯ್ಕೆ ಹಾಗೂ ವಂಶಾಡಳಿತ ರಾಜಕಾರಣದ ಕುರಿತಂತೆ ನೀಡಿದ್ದ ಹೇಳಿಕೆಯೊಂದು ರಾಜ್ಯ ಬಿಜೆಪಿಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.  ಇದೀಗ ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ, ಮುಂಬರುವ ಚುನಾವಣೆಗೆ ಸಂಘಟನಾತ್ಮಕ ಸಿದ್ಧತೆ ಸೇರಿದಂತೆ ಬಿಜೆಪಿಯಲ್ಲಿ ಸಾಕಷ್ಟು ಸಿದ್ಧತೆ ನಡೆಯುತ್ತಿರುವಾಗಲೇ ಸಂತೋಷ್ ಅವರ ಹೇಳಿಕೆಗೆ ಪುಷ್ಟಿ ನೀಡಿತ್ತು.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಚರ್ಚೆಯೂ ಬಹುದಿನಗಳಿಂದ ಇದೆ. ಸದ್ಯ ಅಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಪ್ರಭಾವ ಸಾಕಷ್ಟಿಲ್ಲ ಎನ್ನುವ ಅಭಿಪ್ರಾಯ ಇದ್ದು. ಇದೀಗ ಈ ಸ್ಥಾನಕ್ಕೆ ಹಿಂದೂವಾದಿಯನ್ನೇ ಆಯ್ಕೆ ಮಾಡುವ ಬಗ್ಗೆ ಬಿಜೆಪಿ ವರಿಷ್ಟರು ಚಿಂತನೆ ನಡೆಸಿದ್ದರು ಎನ್ನುವುದು  ಮಾಧ್ಯಮಗಳ ವರದಿ. ಇದರ ಜೊತೆಗೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಪ್ರಮುಖ ಹುದ್ದೆ ನೀಡುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.  ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ವೇಳೆಯೂ ಕೆಲವು ಸಚಿವರ ಕೈಬಿಡುವುದು  ಹಾಗೂ ಹೊಸಬರಿಗೆ ಅವಕಾಶ ನೀಡುವ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗಿದೆ. ಭ್ರಷ್ಟಾಚಾರ, ಬೆಂಬಲಿಗರಿಗೆ ಮಣೆ, ಸ್ವಜನ ಪಕ್ಷಪಾತ ಸೇರಿದಂತೆ ಇತರ ಸಂಗತಿಗಳ ಬಗ್ಗೆ ವರಿಷ್ಠರು ಗುಪ್ತವಾಗಿ ಮಾಹಿತಿ ಸಂಗ್ರಹಿಸಿದ್ದು ಇದೆಲ್ಲಾ ಈಗ ಪ್ರಮುಖ ಪಾತ್ರ ವಹಿಸುತ್ತಿದೆ. ಮುಂದಿನ ಚುನಾವಣೆಯನ್ನು ಗುರಿಯಾಗಿಸಿ ಈ ಬದಲಾವಣೆಗಳು ಆರಂಭವಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

23 minutes ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

40 minutes ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

5 hours ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

2 days ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 days ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

3 days ago