ಕೇರಳದಲ್ಲಿ ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಇದು ಅಪರೂಪದ ಆದರೆ ಅತ್ಯಂತ ಮಾರಕವಾದ ಮಿದುಳಿನ ಸೋಂಕಾಗಿದೆ. ಇದುವರೆಗೆ ಕೇರಳದಲ್ಲಿ 18 ಜನರನ್ನು ಬಲಿ ತೆಗೆದುಕೊಂಡಿದೆ ಮತ್ತು 67 ಜನರಿಗೆ ಸೋಂಕು ತಗುಲಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಕೇರಳದಲ್ಲಿ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಪ್ರಕರಣಗಳ ಕುರಿತು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳುವಂತೆ, ಕಳೆದ ವರ್ಷದಿಂದ, 86 ಪ್ರಕರಣಗಳು ವರದಿಯಾಗಿವೆ. ಮರಣ ಪ್ರಮಾಣ ಶೇ.23 ರಷ್ಟು ಕಂಡುಬಂದಿದೆ. ಮೆದುಳಿನಲ್ಲಿ ಅಮೀಬಾ ಮತ್ತು ಶಿಲೀಂಧ್ರ ಎರಡರ ಕಾರಣದಿಂದ 17 ವರ್ಷದ ವಿದ್ಯಾರ್ಥಿಯ ಪ್ರಕರಣದ ಮೂಲಕ ಬೆಳಕಿಗೆ ಬಂದಿದೆ. ವೈದ್ಯಕೀಯ ಅಧ್ಯಯನದ ಪ್ರಕಾರ ಇದೊಂದು ಗಂಭೀರ ಪ್ರಕರಣವಾಗಿದ್ದು, ಈ ರೋಗ ಬಾಧಿಸಿದರೆ ಬದುಕುವುದು ಕಷ್ಟ ಎಂದು ಹೇಳುತ್ತದೆ. ಈ ರೋಗವನ್ನು ಅಲಪುಳ ವೈದ್ಯಕೀಯ ಕಾಲೇಜು ಇದನ್ನು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ಪ್ರಕರಣ ಎಂದು ಗುರುತಿಸಿದೆ. ಬಾಲಕನನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಿ, ಎರಡು ನರ ಶಸ್ತ್ರಚಿಕಿತ್ಸೆಗಳನ್ನು ನಡೆಸಲಾಯಿತು. ಅದಾದ ಬಳಿಕ ಬಾಲಕನ ಆರೋಗ್ಯ ಸುಧಾರಿಸಿದೆ. ಈಗ ಅಂತಹದ್ದೇ ಹಲವು ಪ್ರಕರಣಗಳು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ.
ಈ ರೋಗವು ನೇಗ್ಲೇರಿಯಾ ಫೌಲೆರಿ ಎಂಬ ಜೀವಿಯಿಂದ ಉಂಟಾಗುತ್ತದೆ, ಇದನ್ನು ಸಾಮಾನ್ಯವಾಗಿ “ಮೆದುಳನ್ನು ತಿನ್ನುವ ಅಮೀಬಾ” ಎಂದು ಕರೆಯಲಾಗುತ್ತದೆ. ಈ ರೋಗವು ವೇಗವಾಗಿ ಮುಂದುವರಿಯುತ್ತದೆ ಮತ್ತು ಹೆಚ್ಚಾಗಿ ಮಾರಕವಾಗಿರುತ್ತದೆ. ಈ ರೋಗವು, ಸೋಂಕಿತ ನೀರು ಮೂಗಿನ ಹೊಳ್ಳೆಗಳಿಗೆ ಪ್ರವೇಶಿಸಿದಾಗ, ಅಮೀಬಾವು ವ್ಯಕ್ತಿಗೆ ಸೋಂಕು ತರುತ್ತದೆ, ಸಾಮಾನ್ಯವಾಗಿ ಈಜುವಾಗ, ಡೈವಿಂಗ್ ಮಾಡುವಾಗ ಅಥವಾ ನೀರಿನಿಂದ ಮೂಗು ತೊಳೆಯುವಾಗ ಈ ಅಮೀಬಾ ಸೇರಿಕೊಳ್ಳುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ನೇಗ್ಲೇರಿಯಾ ಫೌಲೇರಿ ಸಾಮಾನ್ಯವಾಗಿ ಸರೋವರಗಳು, ನದಿಗಳು, ಕೊಳಗಳು ಮತ್ತು ಅಸಮರ್ಪಕವಾಗಿ ಸಂಸ್ಕರಿಸಿದ ಈಜುಕೊಳಗಳಂತಹ ಬೆಚ್ಚಗಿನ ಸಿಹಿನೀರಿನ ಮೂಲಗಳಲ್ಲಿ ಕಂಡುಬರುತ್ತದೆ. ಇದು ಉಷ್ಣವಲಯದ ಮತ್ತು ಉಪೋಷ್ಣವಲಯದ ಪ್ರದೇಶಗಳಲ್ಲಿ ಪ್ರಚಲಿತವಾಗಿರುವ 25 ಡಿಗ್ರಿ ಸೆಲ್ಸಿಯಸ್ ಮತ್ತು 40 ಡಿಗ್ರಿ ಸೆಲ್ಸಿಯಸ್ ನಡುವಿನ ತಾಪಮಾನದಲ್ಲಿ ಉತ್ತಮವಾಗಿ ಬೆಳೆಯುತ್ತದೆ. ಈ ರೋಗದ ಸಾಮಾನ್ಯ ಲಕ್ಷಣಗಳೆಂದರೆ ತೀವ್ರ ತಲೆನೋವು, ಅಧಿಕ ಜ್ವರ, ವಾಕರಿಕೆ, ವಾಂತಿ ಮತ್ತು ಮೂಗಿನಿಂದ ದ್ರವ ಸ್ರಾವ.
ಇದೀಗ ಕೇರಳದಲ್ಲಿ ಜಾಗೃತಿ ಆರಂಭವಾಗಿದ್ದು, ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ ವಿರುದ್ಧ ಜಾಗೃತಿ ಅಭಿಯಾನ ಹಾಗೂ ರಕ್ಷಣಾ ಕೆಲಸಗಳು ನಡೆಯಬೇಕು ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಜನರು ನಿಂತ ಅಥವಾ ಕಲುಷಿತ ಜಲಮೂಲಗಳಲ್ಲಿ, ವಿಶೇಷವಾಗಿ ದನಗಳಿಗೆ ಬಳಸುವ ಜಲಮೂಲಗಳಲ್ಲಿ ಮುಖ ತೊಳೆಯುವುದು ಅಥವಾ ಸ್ನಾನ ಮಾಡುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರವು ಈ ಅಮೀಬಾ ಪೀಡಿತ ಜಿಲ್ಲೆಗಳಲ್ಲಿ ಜ್ವರ ಸಮೀಕ್ಷೆ, ಜಾಗೃತಿ ಅಭಿಯಾನಗಳನ್ನು ನಡೆಸುವುದು ಮತ್ತು ಬಾವಿಗಳು ಮತ್ತು ಸಾರ್ವಜನಿಕ ನೀರಿನ ಮೂಲಗಳನ್ನು ಸ್ವಚ್ಛಗೊಳಿಸಲು ಮತ್ತು ಕ್ಲೋರಿನೇಟ್ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತಹ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…