Advertisement
ಸುದ್ದಿಗಳು

ದೆಹಲಿಯಲ್ಲೂ ಕನ್ನಡದ ಕಂಪು : ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ – ಮೋದಿ ಉದ್ಘಾಟನೆ

Share

ಕನ್ನಡ ಭಾಷೆ ಸುಂದರವಾಗಿದೆ. ಕನ್ನಡ ಸಾಹಿತ್ಯ ಸಮೃದ್ಧವಾಗಿದೆ. ಕನ್ನಡ ಕಲಿಯಿರಿ, ಕನ್ನಡ ಕಲಿಸಿರಿ, ಕಲಿಕೆ ಜೊತೆ ಕಲೆಯಲ್ಲೂ ಅಸಾಧಾರಣ ಸಾಧನೆಯಾಗಿದ್ದು, ಭರತನಾಟ್ಯದಿಂದ ಹಿಡಿದು ಯಕ್ಷಗಾನ ಎಲ್ಲೆಡೆ ಜನಪ್ರಿಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ, ಅವರು ದೆಹಲಿಯ ಟಾಲ್ಕಟೋರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಬಸವಣ್ಣನವರ ಅನುಭವ ಮಂಟಪ ಭಾರತಕ್ಕೆ ದಾರಿದೀಪವಾಗಿದೆ ಹಾಗೂ ಅವರ ವಿಚಾರ ಪರಂಪರೆ ಅಮರವಾಗಿದೆ. ಬಸವಣ್ಣನವರ ವಚನಗಳ ಪುಸ್ತಕ ಬಿಡುಗಡೆ ಮಾಡಿದ್ದು ನನ್ನ ಭಾಗ್ಯ ಎಂದರು. ಒಂದು ಕಾಲದಲ್ಲಿ ಕರ್ನಾಟಕದ ಬಂಡವಾಳ ವಿದೇಶಕ್ಕೆ ಹೋಗುತ್ತಿತ್ತು. ಆದ್ರೀಗ ಕರ್ನಾಟಕ ಈಗ ತುಂಬಾ ಅಭಿವೃದ್ಧಿ ಹೊಂದಿದೆ. ಇದರಿಂದ ಅಧಿಕವಾಗಿ ಬಂಡವಾಳ ಹರಿದು ಬರುತ್ತಿದೆ. ಕರ್ನಾಟಕ ಸಂಸ್ಕೃತಿ, ತಂತ್ರಜ್ಞಾನದಲ್ಲಿ ಮುಂದಿದೆ. ವಿಕಾಸದ ಜೊತೆಗೆ ಪರಂಪರೆಯನ್ನು ಒಟ್ಟಿಗೆ ಕರೆದೊಯ್ಯುತ್ತಿದೆ ಎಂದು ಕರ್ನಾಟಕದ ಬಗ್ಗೆ ಹಾಡಿ ಹೊಗಳಿದರು.

ಕಾರ್ಯಕ್ರಮದಲ್ಲಿ  ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್, ಇಂಧನ ಇಲಾಖೆಯ ಸಚಿವ ಸುನೀಲ್ ಕುಮಾರ್, ಧರ್ಮಸ್ಥಳದ ಧರ್ಮಾಧಿಕಾರಿ, ಸಂಸದ ಡಾ.‌ವೀರೇಂದ್ರ ಹೆಗಡೆ, ಸುತ್ತೂರು ಶ್ರೀಗಳು, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ, ನಂಜಾವಧೂತ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ, ಮೈಸೂರು ಅರಮನೆಯ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​, ಭಾಗಿಯಾಗಿದ್ದು, ಕಾರ್ಯಕ್ರಮದಲ್ಲಿ 3 ಸಾವಿರಕ್ಕೂ ಹೆಚ್ಚು ಹೊರನಾಡು ಕನ್ನಡಿಗರು ಭಾಗಿಯಾಗಿದ್ದಾರೆ.

ದೆಹಲಿಯಲ್ಲೂ ಕನ್ನಡ ಕಂಪು ನನಗೆ ಕಾಣಿಸುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸಮಾರಂಭದಲ್ಲಿ ಮಾತನಾಡಿದ ಅವರು, ಕನ್ನಡ ನಾಡಿನಲ್ಲಿ ಹುಟ್ಟುವುದೇ ಒಂದು ಸೌಭಾಗ್ಯ. ಇತ್ತೀಚೆಗೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ನಡೆದಿದೆ. ದಾವಣಗೆರೆಯಲ್ಲಿ ನಡೆಯುವ ವಿಶ್ವಕನ್ನಡ ಸಮ್ಮೇಳನಕ್ಕೆ 7 ಕೋಟಿ ಕನ್ನಡಿಗರ ಪರವಾಗಿ ಮೋದಿಗೆ ಆಹ್ವಾನ ನೀಡುತ್ತೇನೆ ಎಂದರು.

ಇದೊಂದು ಅಭೂತಪೂರ್ವಾಗಿರುವ ಕಾರ್ಯಕ್ರಮ. ನಾಡಪ್ರಭು ಕೆಂಪೇಗೌಡರ ಅತಿ ಎತ್ತರದ ಪ್ರತಿಮೆ ಉದ್ಘಾಟನೆಯನ್ನು ಪ್ರಧಾನಿಯವರು ಮಾಡಿದ್ದರು. ಈ ನೆನಪು ಹಸಿರಾಗಿರುವಾಗಲೇ ದೆಹಲಿ ಕರ್ನಾಟಕ ಸಂಘದ ಅಮೃತ ಮಹೋತ್ಸವ ಉದ್ಘಾಟಿಸುತ್ತಿರುವುದು ಸಂತೋಷವಾಗಿದೆ. ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಕೇಂದ್ರದ ಐದು ಟ್ರಿಲಿಯನ್ ಎಕಾನಮಿಗೆ ಒಂದು ಟ್ರಿಲಿಯನ್ ಎಕಾನಮಿ ನೀಡುವ ಜವಾಬ್ದಾರಿ ಕನ್ನಡಿಗರದ್ದಾಗಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

5 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

12 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

15 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

24 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

24 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago