Advertisement
ಸುದ್ದಿಗಳು

ಪುಣ್ಯಕೋಟಿ ನಗರ‌ | ಅಮೃತಧಾರಾ ಗೋಶಾಲೆಯಲ್ಲಿ ಗೋಸೇವಾ ಮಾಸಾಚರಣೆ ಸಂಪನ್ನ

Share

ರಾಘವೇಶ್ವರ ಭಾರತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14 ರಿಂದ ಆರಂಭಗೊಂಡ ಒಂದು ತಿಂಗಳ ಗೋಸೇವಾ ಮಾಸಾಚರಣೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ‌ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ವೈಭವ ಹಾಗೂ ವಿಭಿನ್ನತೆಯ ಮೂಲಕ ನಡೆದು ಸೋಮವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.

ಗೋಸೇವಾ ಮಾಸಾಚರಣೆ ಉದ್ಘಾಟನೆಯನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ‌ ಉಪಸ್ಥಿತಿಯೊಂದಿಗೆ ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಉದ್ಘಾಟಿಸಿ‌ದರು.

ಗೋಸೇವಾ ಕಾರ್ಯಕ್ರಮದಲ್ಲಿ ಮುಡಿಪು ಭಾಗದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆಯು ನಿತ್ಯ ನಿರಂತರವಾಗಿ ನಡೆಯಿತು. ಪ್ರತಿನಿತ್ಯ ಸಂಜೆ‌ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ನಿರಂತರ ಭಜನಾ ಸಂಧ್ಯಾ ಭಜನೆಯು ನಡೆಯಿತು.

ಸಂಚಾಲಕ ಟಿ.ಜಿ. ರಾಜಾರಾಮ್ ಭಟ್ ಮಾತನಾಡಿ,‌ ಕೈರಂಗಳ ಪುಣ್ಯಕೋಟಿನಗರದ ಗೋಶಾಲೆಯಲ್ಲಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತಿಂಗಳ ಕಾಲ ನಡೆದ ಗೋಸೇವಾ ಮಾಸಾಚರಣೆಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಎಲ್ಲರ ಪರಿಶ್ರಮ, ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

ಕಣಂತೂರು ಅರಸು ತೋಡಕುಕ್ಕಿನ್ನಾರ್ ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ನಾರ್ಯಗುತ್ತು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಹಿರಿಯರಾದ ಶಂಕರಭಟ್ ಕೊಣಾಜೆ, ಜಯರಾಮ ಶೆಟ್ಟಿ ಕಂಬಳಪದವು, ರವಿ ಮಂಜನಾಡಿ, ಕಿರಣ್ ದಾಸ್ ಹೂವಿನ ಕೊಪ್ಪಳ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು. ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಪಾದಲ್ಪಾಡಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 hour ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

6 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

6 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

16 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

17 hours ago