Advertisement
ಸುದ್ದಿಗಳು

ಪುಣ್ಯಕೋಟಿ ನಗರ‌ | ಅಮೃತಧಾರಾ ಗೋಶಾಲೆಯಲ್ಲಿ ಗೋಸೇವಾ ಮಾಸಾಚರಣೆ ಸಂಪನ್ನ

Share

ರಾಘವೇಶ್ವರ ಭಾರತಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕೈರಂಗಳದ ಪುಣ್ಯಕೋಟಿ ನಗರದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಜ.14 ರಿಂದ ಆರಂಭಗೊಂಡ ಒಂದು ತಿಂಗಳ ಗೋಸೇವಾ ಮಾಸಾಚರಣೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ‌ ಹಾಗೂ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ವೈಭವ ಹಾಗೂ ವಿಭಿನ್ನತೆಯ ಮೂಲಕ ನಡೆದು ಸೋಮವಾರ ದೀಪೋತ್ಸವದ ಮೂಲಕ ಸಂಪನ್ನಗೊಂಡಿತು.

ಗೋಸೇವಾ ಮಾಸಾಚರಣೆ ಉದ್ಘಾಟನೆಯನ್ನು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ‌ ಉಪಸ್ಥಿತಿಯೊಂದಿಗೆ ಮುಂಬೈ ಉದ್ಯಮಿ ಸದಾಶಿವ ಶೆಟ್ಟಿ ಕೂಳೂರು ಉದ್ಘಾಟಿಸಿ‌ದರು.

ಗೋಸೇವಾ ಕಾರ್ಯಕ್ರಮದಲ್ಲಿ ಮುಡಿಪು ಭಾಗದ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಗೋಸೇವೆಯು ನಿತ್ಯ ನಿರಂತರವಾಗಿ ನಡೆಯಿತು. ಪ್ರತಿನಿತ್ಯ ಸಂಜೆ‌ ವಿವಿಧ ಭಜನಾ ಮಂಡಳಿಗಳ ಆಶ್ರಯದಲ್ಲಿ ನಿರಂತರ ಭಜನಾ ಸಂಧ್ಯಾ ಭಜನೆಯು ನಡೆಯಿತು.

ಸಂಚಾಲಕ ಟಿ.ಜಿ. ರಾಜಾರಾಮ್ ಭಟ್ ಮಾತನಾಡಿ,‌ ಕೈರಂಗಳ ಪುಣ್ಯಕೋಟಿನಗರದ ಗೋಶಾಲೆಯಲ್ಲಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ತಿಂಗಳ ಕಾಲ ನಡೆದ ಗೋಸೇವಾ ಮಾಸಾಚರಣೆಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಎಲ್ಲರ ಪರಿಶ್ರಮ, ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿದೆ ಎಂದರು.

ಕಣಂತೂರು ಅರಸು ತೋಡಕುಕ್ಕಿನ್ನಾರ್ ಕ್ಷೇತ್ರದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ನಾರ್ಯಗುತ್ತು, ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಹಿರಿಯರಾದ ಶಂಕರಭಟ್ ಕೊಣಾಜೆ, ಜಯರಾಮ ಶೆಟ್ಟಿ ಕಂಬಳಪದವು, ರವಿ ಮಂಜನಾಡಿ, ಕಿರಣ್ ದಾಸ್ ಹೂವಿನ ಕೊಪ್ಪಳ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಇದ್ದರು. ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಪಾದಲ್ಪಾಡಿ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

47 minutes ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 hour ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

9 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

14 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

15 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago