MIRROR FOCUS

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಸೂಕ್ತ ನಿರ್ಧಾರ | ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದ ಭರವಸೆ | ಕಾನೂನು ಹೋರಾಟಕ್ಕೆ ಸಂದ ಜಯ | ಕೃಷ್ಣಬೈರೇಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಈ ಬಾರಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲ ದಿನಗಳ ಹಿಂದೆ ಕೆಲ ಮಳೆ(Rain) ಕೊಂಚ ಮಳೆಯಾಗಿದ್ದರೂ, ರೈತರು(Farmer) ನೀರಿಲ್ಲದೆ(Water) ಬೆಳೆ(Crop) ಬೆಳೆಯಲಾಗದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ(State govt) ಬರ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರವನ್ನು(Central Govt) ಕೇಳಿಕೊಂಡಿತ್ತು. ಆದರೆ ಕೇಂದ್ರ ಬರ ಪರಿಹಾರ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿತ್ತು. ಇದೀಗ ಬರ ಪರಿಹಾರ ಬಿಡುಗಡೆ (Drought Relief Funds) ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ (Supreme Court) ಹೇಳಿದ್ದಾರೆ. ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ‌.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

Advertisement
Advertisement

ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ (Election Commission) ಜೊತೆಗೆ ಈ ಬಗ್ಗೆ ಚರ್ಚಿಸಿದ ಬರ ಪರಿಹಾರ ಬಿಡುಗಡೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕೇಂದ್ರ ಸರ್ಕಾರ ಭರವಸೆ ಬೆನ್ನಲೆ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದರು. ಅರ್ಜಿ ವಿಚಾರಣೆಯನ್ನು ಕೋರ್ಟ್‌ ಏ.29ಕ್ಕೆ ಮುಂದೂಡಿದೆ.  ವಿಚಾರಣೆ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದೆವು. ಇಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಈ ವಾರದಲ್ಲಿ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದೆ ರಾಜ್ಯ ಸರ್ಕಾರ ಕೋರ್ಟ್ ಮೂಲಕ ಪರಿಹಾರ ಪಡೆಯುವಂತಾಗಿದೆ. ಇದು ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಸಂದ ಜಯ ಎಂದರು.

18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಳಿದೆ 4663 ಕೋಟಿ ಹಣವನ್ನಾದರೂ ಮೊದಲು ಬಿಡುಗಡೆ ಮಾಡಲಿ ಇದರಿಂದ ರೈತರಿಗೆ ಸಹಾಯವಾಗಲಿದೆ, ರೈತರಿಗೆ ಅನಿವಾರ್ಯತೆ ಇದ್ದಾಗ ಪರಿಹಾರ ನೀಡಬೇಕು ಮುಗಿದ ಮೇಲಲ್ಲ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮೊದಲ ಹಂತದ ವೇಳೆ ಪರಿಹಾರ ಬಿಡುಗಡೆ ರಾಜಕೀಯ ತಿರುವು ಪಡೆಯುವ ಸಾಧ್ಯತೆ ಬಗ್ಗೆ ಮಾತನಾಡಿದ ಅವರು, ನಮ್ಮ ಹೋರಾಟದಿಂದ ನ್ಯಾಯ ಸಿಗುವ ಹೊಸ್ತಿಲಲ್ಲಿ ಬಂದು ನಿಂತಿದ್ದೇವೆ, ಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ ನಮ್ಮಗೆ ರಾಜ್ಯದ ರೈತರ ಹಿತ ಮುಖ್ಯ, ಇದು ರಾಜಕೀಯ ಮಾಡುವ ವಿಷಯ ಅಲ್ಲ. ಕೇಂದ್ರ ಸರ್ಕಾರ ಈಗಾಗಲೇ ನಮ್ಮಗೆ ಅನ್ಯಾಯ ಮಾಡಿದೆ, ಕೋರ್ಟ್ ಮೂಲಕ ನಾವು ಪರಿಹಾರ ಪಡೆಯುವ ಸನ್ನಿವೇಶ ಬಂದಿದೆ ಎಂದರು.

ನಮ್ಮನ್ನು ಟೀಕೆ ಮಾಡಲು ಕೇಂದ್ರ ಸರ್ಕಾರದ ಬಳಿ ಒಂದು ಅಂಶವೂ ಇಲ್ಲ, ತಡ ಆಗಿರುವುದು ಕೇಂದ್ರ ಸರ್ಕಾರದ ಕಡೆಯಿಂದ ಮಾತ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎನ್ನುವುದಕ್ಕೆ ಇದೆ ಸಾಕ್ಷಿ, ಇಂತಹ ಪ್ರಕರಣದಲ್ಲಿ ಯಾಕೆ ರಾಜ್ಯಗಳು ಯಾಕೆ ಕೋರ್ಟ್‌ಗೆ ಬರಬೇಕು ಎಂದು ಪೀಠ ಕೇಳಿದೆ? ಇದಕ್ಕಿಂತ ಹೆಚ್ಚು ಏನ್ ಹೇಳಬೇಕು ಎಂದರು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

3 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

7 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

7 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

15 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

16 hours ago

ಭಾರೀ ಮಳೆ ಸಾಧ್ಯತೆ | ಕೊಡಗು-ಉಡುಪಿ ಜಿಲ್ಲೆಯಲ್ಲಿ ಎಚ್ಚರಿಕೆ | ಕೊಡಗಿನಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ | ಉಡುಪಿಯಲ್ಲಿ ಶಾಲೆಗಳಿಗೆ ರಜೆ |

ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ  ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…

17 hours ago