Advertisement
MIRROR FOCUS

ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆಗೆ ಈ ವಾರದಲ್ಲಿ ಸೂಕ್ತ ನಿರ್ಧಾರ | ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರ್ಕಾರದ ಭರವಸೆ | ಕಾನೂನು ಹೋರಾಟಕ್ಕೆ ಸಂದ ಜಯ | ಕೃಷ್ಣಬೈರೇಗೌಡ

Share

ರಾಜ್ಯದಲ್ಲಿ ಈ ಬಾರಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲ ದಿನಗಳ ಹಿಂದೆ ಕೆಲ ಮಳೆ(Rain) ಕೊಂಚ ಮಳೆಯಾಗಿದ್ದರೂ, ರೈತರು(Farmer) ನೀರಿಲ್ಲದೆ(Water) ಬೆಳೆ(Crop) ಬೆಳೆಯಲಾಗದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ(State govt) ಬರ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರವನ್ನು(Central Govt) ಕೇಳಿಕೊಂಡಿತ್ತು. ಆದರೆ ಕೇಂದ್ರ ಬರ ಪರಿಹಾರ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗಿತ್ತು. ಇದೀಗ ಬರ ಪರಿಹಾರ ಬಿಡುಗಡೆ (Drought Relief Funds) ವಿಚಾರಕ್ಕೆ ಸಂಬಂಧಿಸಿದಂತೆ ಈ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಸುಪ್ರೀಂಕೋರ್ಟ್‌ಗೆ (Supreme Court) ಹೇಳಿದ್ದಾರೆ. ಕರ್ನಾಟಕ ಸರ್ಕಾರ (Karnataka Government) ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ‌.ಬಿ.ಆರ್ ಗವಾಯಿ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ, ಚುನಾವಣಾ ಆಯೋಗದ (Election Commission) ಜೊತೆಗೆ ಈ ಬಗ್ಗೆ ಚರ್ಚಿಸಿದ ಬರ ಪರಿಹಾರ ಬಿಡುಗಡೆ ಆಯೋಗ ಅನುಮತಿ ನೀಡಿದೆ. ಹೀಗಾಗಿ ಈ ವಾರದೊಳಗೆ ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಕೇಂದ್ರ ಸರ್ಕಾರ ಭರವಸೆ ಬೆನ್ನಲೆ ಮಧ್ಯಪ್ರವೇಶ ಮಾಡಿದ ನ್ಯಾ.ಬಿ.ಆರ್ ಗವಾಯಿ, ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ವಿಷಯಗಳನ್ನು ಸೌರ್ಹಾದಯುತವಾಗಿ ಬಗೆಹರಿಸಿಕೊಳ್ಳಬೇಕು. ಸುಪ್ರೀಂಕೋರ್ಟ್ ತನಕ ಈ ಪ್ರಕರಣ ಬರಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದರು. ಅರ್ಜಿ ವಿಚಾರಣೆಯನ್ನು ಕೋರ್ಟ್‌ ಏ.29ಕ್ಕೆ ಮುಂದೂಡಿದೆ.  ವಿಚಾರಣೆ ಬಳಿಕ ದೆಹಲಿಯಲ್ಲಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda), ಬರ ಪರಿಹಾರ ಬಿಡುಗಡೆಗೆ ನಿರ್ದೇಶನ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿಯನ್ನು ಸಲ್ಲಿಸಿದ್ದೆವು. ಇಂದಿನ ವಿಚಾರಣೆಯಲ್ಲಿ ಕೇಂದ್ರ ಸರ್ಕಾರ ಈ ವಾರದಲ್ಲಿ ತಿರ್ಮಾನ ಕೈಗೊಳ್ಳುವ ಭರವಸೆ ನೀಡಿದೆ ರಾಜ್ಯ ಸರ್ಕಾರ ಕೋರ್ಟ್ ಮೂಲಕ ಪರಿಹಾರ ಪಡೆಯುವಂತಾಗಿದೆ. ಇದು ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ಸಂದ ಜಯ ಎಂದರು.

18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಕೇಳಿದೆ 4663 ಕೋಟಿ ಹಣವನ್ನಾದರೂ ಮೊದಲು ಬಿಡುಗಡೆ ಮಾಡಲಿ ಇದರಿಂದ ರೈತರಿಗೆ ಸಹಾಯವಾಗಲಿದೆ, ರೈತರಿಗೆ ಅನಿವಾರ್ಯತೆ ಇದ್ದಾಗ ಪರಿಹಾರ ನೀಡಬೇಕು ಮುಗಿದ ಮೇಲಲ್ಲ ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಮೊದಲ ಹಂತದ ವೇಳೆ ಪರಿಹಾರ ಬಿಡುಗಡೆ ರಾಜಕೀಯ ತಿರುವು ಪಡೆಯುವ ಸಾಧ್ಯತೆ ಬಗ್ಗೆ ಮಾತನಾಡಿದ ಅವರು, ನಮ್ಮ ಹೋರಾಟದಿಂದ ನ್ಯಾಯ ಸಿಗುವ ಹೊಸ್ತಿಲಲ್ಲಿ ಬಂದು ನಿಂತಿದ್ದೇವೆ, ಕೋರ್ಟ್ ಮಧ್ಯಪ್ರವೇಶ ಮಾಡದಿದ್ದರೆ ಸರ್ಕಾರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ ನಮ್ಮಗೆ ರಾಜ್ಯದ ರೈತರ ಹಿತ ಮುಖ್ಯ, ಇದು ರಾಜಕೀಯ ಮಾಡುವ ವಿಷಯ ಅಲ್ಲ. ಕೇಂದ್ರ ಸರ್ಕಾರ ಈಗಾಗಲೇ ನಮ್ಮಗೆ ಅನ್ಯಾಯ ಮಾಡಿದೆ, ಕೋರ್ಟ್ ಮೂಲಕ ನಾವು ಪರಿಹಾರ ಪಡೆಯುವ ಸನ್ನಿವೇಶ ಬಂದಿದೆ ಎಂದರು.

ನಮ್ಮನ್ನು ಟೀಕೆ ಮಾಡಲು ಕೇಂದ್ರ ಸರ್ಕಾರದ ಬಳಿ ಒಂದು ಅಂಶವೂ ಇಲ್ಲ, ತಡ ಆಗಿರುವುದು ಕೇಂದ್ರ ಸರ್ಕಾರದ ಕಡೆಯಿಂದ ಮಾತ್ರ, ರಾಜ್ಯಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ ಎನ್ನುವುದಕ್ಕೆ ಇದೆ ಸಾಕ್ಷಿ, ಇಂತಹ ಪ್ರಕರಣದಲ್ಲಿ ಯಾಕೆ ರಾಜ್ಯಗಳು ಯಾಕೆ ಕೋರ್ಟ್‌ಗೆ ಬರಬೇಕು ಎಂದು ಪೀಠ ಕೇಳಿದೆ? ಇದಕ್ಕಿಂತ ಹೆಚ್ಚು ಏನ್ ಹೇಳಬೇಕು ಎಂದರು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

1 hour ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

6 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

14 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

15 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago