Advertisement
Opinion

#Ayurveda | ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ನಸ್ಯಕರ್ಮ ಚಿಕಿತ್ಸೆ : ದೇಹದ ಶ್ವಾಸೆಂದ್ರೀಯ ಮಾರ್ಗವನ್ನು ಸ್ವಚ್ಛಗೊಳಿಸಲು ಇದು ಉತ್ತಮ

Share

ಸ್ಯಕರ್ಮ ಚಿಕಿತ್ಸೆ.. ಅನೇಕ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿಯಾಗಿರುತ್ತದೆ ಅಂತಹ ಚಿಕಿತ್ಸೆಯಲ್ಲಿ ನಸ್ಯ ಕರ್ಮ ಚಿಕಿತ್ಸೆ ಕೂಡ ಒಂದಾಗಿದೆ ನಸ್ಯಕರ್ಮ ಚಿಕಿತ್ಸೆ ಎನ್ನುವುದು ಪಂಚಕರ್ಮ ಚಿಕಿತ್ಸೆಯ ಒಂದು ಭಾಗವಾಗಿದೆ. ಇದು ದೇಹದಲ್ಲಿನ ಅತಿಯಾದ ಕಫವನ್ನು ಹೊರ ಹಾಕುವ ಮೂಲಕ ದೇಹದ ಶ್ವಾಸೆಂದ್ರೀಯ ಮಾರ್ಗವನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ.

ನಸ್ಯ ಎಂದರೆ ಮೂಗಿನ ದ್ವಾರದ ಮೂಲಕ ಔಷಧೀಯ ತೈಲ, ತುಪ್ಪ, ಪುಡಿ, ಕಚ್ಚಾ ಗಿಡ ಮೂಲಿಕೆಗಳ ರಸಗಳು, ಹಾಲು ಇತ್ಯಾದಿಗಳನ್ನು ನಿರ್ದಿಷ್ಟ ಪ್ರಮಾಣದಲ್ಲಿ ವೈದ್ಯರ ಸಮ್ಮುಖದಲ್ಲಿ ಬಳಸಿ ಚಿಕಿತ್ಸೆ ನೀಡುವಂತದ್ದು. ಮೂಗಿನ ಮೂಲಕ ಮೆದುಳು ಹಾಗೂ ಶರೀರಕ್ಕೆ ತಲುಪಿ ಈ ಚಿಕಿತ್ಸೆ ಪರಿಣಾಮಕಾರಿ ಆಗುವುದು.  (ನಾಸೋ ಹಿ: ಶಿರಸೋದ್ವಾರಂ )
ಸಾಮಾನ್ಯವಾಗಿ ಸೈನಸೈಟಿಸ್ ಇರುವವರಿಗೆ ಈ ಉಸಿರಾಟದ ಸಮಸ್ಯೆ ಕಾಡುತ್ತದೆ. ಇದರಿಂದ ಮೂಗು ಕಟ್ಟಿಕೊಳ್ಳುವುದು, ತಲೆನೋವು,ವಾಸನೆ ಮತ್ತು ರುಚಿಯ ಅನುಭವ ಕಡಿಮೆ ಆಗುವುದು, ಗಂಟಲು ಕೆರೆತ, ಶೀತ ಮೊದಲಾದ ವಿವಿಧ ರೀತಿಯ ಸಮಸ್ಯೆಗಳು ಉಂಟಾಗುವುದು. ಮೂಗಿನ ಮೂಲಕ ಔಷದವನ್ನು ಹಾಕಿದಾಗ ಲೋಳೆಪೊರೆಯ ಒಳಪದರವನ್ನು ನಿವಾರಿಸಿ ಉಸಿರಾಟಕ್ಕೆ ನಿರಾಳತೆಯನ್ನು ಉಂಟು ಮಾಡುವುದು. ಹೀಗಾಗಿ ಸೈನಸ್ ಸಮಸ್ಯೆಗಳಿಗೆ ನಸ್ಯಕರ್ಮ ಉತ್ತಮ ಚಿಕಿತ್ಸೆ. ಇದರಿಂದ ನಿದ್ರಾಹೀನತೆ ಸಮಸ್ಯೆ ಕೂಡ ನಿವಾರಣೆಯಾಗಿ ಚೆನ್ನಾಗಿ ನಿದ್ದೆ ಬರುತ್ತದೆ.

ಕೂದಲು ಉದುರುವಿಕೆಯನ್ನು ತಡೆಗಟ್ಟಲು ಸಹ ಈ ನಸ್ಯ ಚಿಕಿತ್ಸೆಯನ್ನು ಬಳಸಲಾಗುತ್ತದೆ. ಇದು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಹಾಗೂ ಕೂದಲಿನ ರಚನೆಯನ್ನು ಸರಿಪಡಿಸುವುದು ಮಾತ್ರವಲ್ಲದೇ ಬಿಳಿಕೂದಲಿನ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಸ್ಯಕರ್ಮ ಒಟ್ಟಾರೆಯಾಗಿ ಕುತ್ತಿಗೆ ಮತ್ತು ಮೇಲ್ಭಾಗದ ಅಂಗಗಳನ್ನು ಆರೋಗ್ಯವಾಗಿಡಲು ಸಹಾಯಕಾರಿ ಆಗುತ್ತದೆ ಹೀಗಾಗಿ ಕುತ್ತಿಗೆ ನೋವು ನಿವಾರಣೆಗೆ ನಸ್ಯ ಕರ್ಮ ಚಿಕಿತ್ಸೆ ಉತ್ತಮವಾಗಿದೆ ಸಾಮಾನ್ಯವಾಗಿ ಕುತ್ತಿಗೆ ನೋವು ಬಿಗಿತಕ್ಕೆ ಕಾರಣ ಇಂಟರ್ ವರ್ಟಿಬ್ರಲ್ ಡಿಸ್ಕ್ ಗಳ ನಿರ್ಜಲೀಕರಣ. ನಸ್ಯ ಚಿಕಿತ್ಸೆಯ ಮೂಲಕ ಡ್ರೈ ಆಗಿರುವ ಕುತ್ತಿಗೆ ಭಾಗಕ್ಕೆ ಆರಾಮದಾಯಕ ಅನುಭವ ಸಿಗುತ್ತದೆ ಈ ಮೂಲಕ ಕುತ್ತಿಗೆ ನೋವು ನಿವಾರಿಸಬಹುದು.

ನಸ್ಯ ಚಿಕಿತ್ಸೆ ತೆಗೆದು ಕೊಳ್ಳುವಾಗ ಪಥ್ಯವನ್ನು ಅನುಸರಿಸ ಬೇಕು ಹಾಗೂ ಸಾಮಾನ್ಯವಾಗಿ 7 ದಿನ ಈ ಚಿಕಿತ್ಸೆಯನ್ನು ವೈದ್ಯರ ಸಮ್ಮುಖದಲ್ಲಿ ಮಾಡಲಾಗುತ್ತದೆ. ಇದನ್ನು ಸರಿಯಾದ ಕ್ರಮದಲ್ಲಿ ನೀಡದೆ ಹೋದಲ್ಲಿ ಅಡ್ಡಪರಿಣಾಮ ಉಂಟಾಗುವುದು. ಆದ ಕಾರಣ ರೋಗಕ್ಕನುಸರವಾಗಿ ಯಾವ ರೀತಿಯ ನಸ್ಯ ಕರ್ಮ ಚಿಕಿತ್ಸೆ ಉತ್ತಮ ಎಂದು ಆಯ್ದು ಸರಿಯಾದ ಕ್ರಮದಲ್ಲಿ ನುರಿತ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ತೆಗೆದುಕೊಳ್ಳುವುದು ಉತ್ತಮ.

ಬರಹ :
Dr Jyothi k, Laxmi Clinic Mangalore 94481 68053
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

14 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

2 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago