Advertisement
Opinion

#Ayurveda | ಅನೇಕ ಆರೋಗ್ಯ ಸಮಸ್ಯೆಗಳಿಗೆ ಪರಿಣಾಮಕಾರಿ ನಸ್ಯಕರ್ಮ ಚಿಕಿತ್ಸೆ : ದೇಹದ ಶ್ವಾಸೆಂದ್ರೀಯ ಮಾರ್ಗವನ್ನು ಸ್ವಚ್ಛಗೊಳಿಸಲು ಇದು ಉತ್ತಮ

Share

ಸ್ಯಕರ್ಮ ಚಿಕಿತ್ಸೆ.. ಅನೇಕ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ಚಿಕಿತ್ಸೆ ಪರಿಣಾಮಕಾರಿಯಾಗಿರುತ್ತದೆ ಅಂತಹ ಚಿಕಿತ್ಸೆಯಲ್ಲಿ ನಸ್ಯ ಕರ್ಮ ಚಿಕಿತ್ಸೆ ಕೂಡ ಒಂದಾಗಿದೆ ನಸ್ಯಕರ್ಮ ಚಿಕಿತ್ಸೆ ಎನ್ನುವುದು ಪಂಚಕರ್ಮ ಚಿಕಿತ್ಸೆಯ ಒಂದು ಭಾಗವಾಗಿದೆ. ಇದು ದೇಹದಲ್ಲಿನ ಅತಿಯಾದ ಕಫವನ್ನು ಹೊರ ಹಾಕುವ ಮೂಲಕ ದೇಹದ ಶ್ವಾಸೆಂದ್ರೀಯ ಮಾರ್ಗವನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ.

ನಸ್ಯ ಎಂದರೆ ಮೂಗಿನ ದ್ವಾರದ ಮೂಲಕ ಔಷಧೀಯ ತೈಲ, ತುಪ್ಪ, ಪುಡಿ, ಕಚ್ಚಾ ಗಿಡ ಮೂಲಿಕೆಗಳ ರಸಗಳು, ಹಾಲು ಇತ್ಯಾದಿಗಳನ್ನು ನಿರ್ದಿಷ್ಟ ಪ್ರಮಾಣದಲ್ಲಿ ವೈದ್ಯರ ಸಮ್ಮುಖದಲ್ಲಿ ಬಳಸಿ ಚಿಕಿತ್ಸೆ ನೀಡುವಂತದ್ದು. ಮೂಗಿನ ಮೂಲಕ ಮೆದುಳು ಹಾಗೂ ಶರೀರಕ್ಕೆ ತಲುಪಿ ಈ ಚಿಕಿತ್ಸೆ ಪರಿಣಾಮಕಾರಿ ಆಗುವುದು.  (ನಾಸೋ ಹಿ: ಶಿರಸೋದ್ವಾರಂ )
ಸಾಮಾನ್ಯವಾಗಿ ಸೈನಸೈಟಿಸ್ ಇರುವವರಿಗೆ ಈ ಉಸಿರಾಟದ ಸಮಸ್ಯೆ ಕಾಡುತ್ತದೆ. ಇದರಿಂದ ಮೂಗು ಕಟ್ಟಿಕೊಳ್ಳುವುದು, ತಲೆನೋವು,ವಾಸನೆ ಮತ್ತು ರುಚಿಯ ಅನುಭವ ಕಡಿಮೆ ಆಗುವುದು, ಗಂಟಲು ಕೆರೆತ, ಶೀತ ಮೊದಲಾದ ವಿವಿಧ ರೀತಿಯ ಸಮಸ್ಯೆಗಳು ಉಂಟಾಗುವುದು. ಮೂಗಿನ ಮೂಲಕ ಔಷದವನ್ನು ಹಾಕಿದಾಗ ಲೋಳೆಪೊರೆಯ ಒಳಪದರವನ್ನು ನಿವಾರಿಸಿ ಉಸಿರಾಟಕ್ಕೆ ನಿರಾಳತೆಯನ್ನು ಉಂಟು ಮಾಡುವುದು. ಹೀಗಾಗಿ ಸೈನಸ್ ಸಮಸ್ಯೆಗಳಿಗೆ ನಸ್ಯಕರ್ಮ ಉತ್ತಮ ಚಿಕಿತ್ಸೆ. ಇದರಿಂದ ನಿದ್ರಾಹೀನತೆ ಸಮಸ್ಯೆ ಕೂಡ ನಿವಾರಣೆಯಾಗಿ ಚೆನ್ನಾಗಿ ನಿದ್ದೆ ಬರುತ್ತದೆ.

ಕೂದಲು ಉದುರುವಿಕೆಯನ್ನು ತಡೆಗಟ್ಟಲು ಸಹ ಈ ನಸ್ಯ ಚಿಕಿತ್ಸೆಯನ್ನು ಬಳಸಲಾಗುತ್ತದೆ. ಇದು ಚರ್ಮದ ಬಣ್ಣವನ್ನು ಸುಧಾರಿಸುತ್ತದೆ ಹಾಗೂ ಕೂದಲಿನ ರಚನೆಯನ್ನು ಸರಿಪಡಿಸುವುದು ಮಾತ್ರವಲ್ಲದೇ ಬಿಳಿಕೂದಲಿನ ಸಮಸ್ಯೆಯನ್ನು ತಡೆಗಟ್ಟುತ್ತದೆ. ನಸ್ಯಕರ್ಮ ಒಟ್ಟಾರೆಯಾಗಿ ಕುತ್ತಿಗೆ ಮತ್ತು ಮೇಲ್ಭಾಗದ ಅಂಗಗಳನ್ನು ಆರೋಗ್ಯವಾಗಿಡಲು ಸಹಾಯಕಾರಿ ಆಗುತ್ತದೆ ಹೀಗಾಗಿ ಕುತ್ತಿಗೆ ನೋವು ನಿವಾರಣೆಗೆ ನಸ್ಯ ಕರ್ಮ ಚಿಕಿತ್ಸೆ ಉತ್ತಮವಾಗಿದೆ ಸಾಮಾನ್ಯವಾಗಿ ಕುತ್ತಿಗೆ ನೋವು ಬಿಗಿತಕ್ಕೆ ಕಾರಣ ಇಂಟರ್ ವರ್ಟಿಬ್ರಲ್ ಡಿಸ್ಕ್ ಗಳ ನಿರ್ಜಲೀಕರಣ. ನಸ್ಯ ಚಿಕಿತ್ಸೆಯ ಮೂಲಕ ಡ್ರೈ ಆಗಿರುವ ಕುತ್ತಿಗೆ ಭಾಗಕ್ಕೆ ಆರಾಮದಾಯಕ ಅನುಭವ ಸಿಗುತ್ತದೆ ಈ ಮೂಲಕ ಕುತ್ತಿಗೆ ನೋವು ನಿವಾರಿಸಬಹುದು.

ನಸ್ಯ ಚಿಕಿತ್ಸೆ ತೆಗೆದು ಕೊಳ್ಳುವಾಗ ಪಥ್ಯವನ್ನು ಅನುಸರಿಸ ಬೇಕು ಹಾಗೂ ಸಾಮಾನ್ಯವಾಗಿ 7 ದಿನ ಈ ಚಿಕಿತ್ಸೆಯನ್ನು ವೈದ್ಯರ ಸಮ್ಮುಖದಲ್ಲಿ ಮಾಡಲಾಗುತ್ತದೆ. ಇದನ್ನು ಸರಿಯಾದ ಕ್ರಮದಲ್ಲಿ ನೀಡದೆ ಹೋದಲ್ಲಿ ಅಡ್ಡಪರಿಣಾಮ ಉಂಟಾಗುವುದು. ಆದ ಕಾರಣ ರೋಗಕ್ಕನುಸರವಾಗಿ ಯಾವ ರೀತಿಯ ನಸ್ಯ ಕರ್ಮ ಚಿಕಿತ್ಸೆ ಉತ್ತಮ ಎಂದು ಆಯ್ದು ಸರಿಯಾದ ಕ್ರಮದಲ್ಲಿ ನುರಿತ ವೈದ್ಯರೊಂದಿಗೆ ಸಮಾಲೋಚನೆ ಮಾಡಿ ತೆಗೆದುಕೊಳ್ಳುವುದು ಉತ್ತಮ.

ಬರಹ :
Dr Jyothi k, Laxmi Clinic Mangalore 94481 68053
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

22 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago