Advertisement
Opinion

ಚುನಾವಣೆ ಎಂಬುದು ಯುದ್ಧವಲ್ಲ | ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ | ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ |

Share

ನಮ್ಮ ಭಾರತ(India) ವಿಶ್ವದ ಅತ್ಯಂತ ದೊಡ್ಡ, ಹಾಗೂ ಬಲಿಷ್ಠವಾದ, ಪ್ರಜಾಪ್ರಭುತ್ವವುಳ್ಳ ರಾಷ್ಟ್ರ(Democratic county). ನಮ್ಮ ರಾಷ್ಟ್ರದ ಸಂವಿಧಾನ(Constitution), ಬದ್ಧವಾಗಿ ಚುನಾವಣೆ(Election) ಘೋಷಣೆಯಾಗಿದೆ. ಮುಂದಿನ ಕೆಲವು ದಿನಗಳ ಪರ್ಯಂತ ನಡೆಯುವ ಈ ಕಾರ್ಯಕ್ರಮ.  ಈ ಚುನಾವಣೆಯಲ್ಲಿ ಸರಿಸುಮಾರು 56 ರಾಜಕೀಯ ಪಕ್ಷಗಳು(Political parties) ಹಾಗೂ ಈ ಚುನಾವಣೆಯಲ್ಲಿ, ಸರಿಸುಮಾರು 98 ಕೋಟಿ ಜನ ಮತದಾರರು(Voters) ತಮ್ಮ ಮತದಾನದ, ಹಕ್ಕನ್ನು ಚಲಾಯಿಸುತ್ತಾರೆ.

ಚುನಾವಣೆ ಎಂಬುದು ಶತ್ರುವಿನ ಜೊತೆ ಮಾಡುವ ಯುದ್ಧವಲ್ಲ, ಬಾಹ್ಯ ಶಕ್ತಿಗಳ ನಡುವಿನ ಹೋರಾಟವಲ್ಲ. ಅದು ನಮ್ಮದೇ ಜನಗಳ ನಡುವಿನ ಒಂದು ಸಾಮಾನ್ಯ ಸ್ಪರ್ಧೆ. ಯಾರೋ ಒಬ್ಬರು ಗೆಲ್ಲುತ್ತಾರೆ ಮತ್ತೊಬ್ಬರು ಸೋಲುತ್ತಾರೆ. ಅದರಿಂದ ಅಂತಹ ದೊಡ್ಡ ವ್ಯತ್ಯಾಸವೇನು ಆಗುವುದಿಲ್ಲ, ಈ ಚುನಾವಣೆ ಎಂಬುದು ಒಂದು, ಸ್ಪರ್ಧೆ. ಅನಾವಶ್ಯಕವಾಗಿ ನಾವುಗಳು ಏಕೆ ಮನಸ್ತಾಪ ಮಾಡಿಕೊಳ್ಳಬೇಕು.  ನಾವುಗಳು ಏಕೆ ಶತ್ರುಗಳಾಗಬೇಕು. ನಾವುಗಳು ಏಕೆ ಒಬ್ಬರಿಗೊಬ್ಬರು ನಿಂದಿಸಿಕೊಳ್ಳಬೇಕು, ಸಮಯ ಚಿತ್ತವನ್ನು ಹಾಗೂ ಸೌಮ್ಯವನ್ನು, ಕಾಪಾಡಿಕೊಳ್ಳುವ ಮೂಲಕ ಆರೋಗ್ಯಕರ ಅಭಿಪ್ರಾಯಗಳನ್ನು, ಮುಕ್ತವಾಗಿ ಹಂಚಿಕೊಳ್ಳುತ್ತಾ ಸಂಬಂಧಗಳನ್ನು ಸಹಜವಾಗಿಯೇ, ಕಾಪಾಡಿಕೊಳ್ಳಬಹುದಲ್ಲವೇ, ನಮ್ಮ  ಗೆಳೆತನದ ಘನತೆಯನ್ನು ಕಾಪಾಡಿಕೊಳ್ಳೋಣ.

ಈ ಸಂದರ್ಭದಲ್ಲಿ ನಮ್ಮ ಜವಾಬ್ದಾರಿ ಮುಖ್ಯವಾಗಿ ಸೋಷಿಯಲ್ ಮೀಡಿಯಗಳಲ್ಲಿ ಬರುವ ಹಲವಾರು ವಿಷಯಗಳು ಅದನ್ನು ಸಹಜವಾಗಿ ಸ್ವೀಕರಿಸೋಣ.

  1. ಮೊದಲಿಗೆ ಈ ಟಿವಿ ಮಾಧ್ಯಮಗಳು ಸ್ವಂತ ಉದ್ದೇಶಕ್ಕಾಗಿ ಪ್ರೇರಿತ ವಿವೇಚನಾ ರಹಿತ ಪ್ರಚೋದಾತ್ಮಕ, ಹೇಳಿಕೆಗಳನ್ನು ನಿರ್ಲಕ್ಷಿಸೋಣ – ಕುರುಕ್ಷೇತ್ರ – ಅಖಾಡ – ಯುದ್ಧ- ಮಹಾಭಾರತ- ಅರ್ಜುನ- ಕರ್ಣ- ರಾಜಕೀಯ ಭೀಷ್ಮ – ಚುನಾವಣಾ ಚಾಣಕ್ಯ, ಮುಂತಾದ ಕೆರಳಿಸುವ ಕಾರ್ಯಕ್ರಮಗಳನ್ನು ಹಾಸ್ಯಾಸ್ಪದವಾಗಿ ನೋಡೋಣ.
  2. ಹೌದು, ಇದು ಪ್ರಜಾಪ್ರಭುತ್ವ ಮತ್ತು ಮುಕ್ತ ಅಭಿವ್ಯಕ್ತಿ ಸ್ವಾತಂತ್ರ್ಯವಿರುವ ದೇಶ ನಿಜ. ಹಾಗಂತ ಹುಚ್ಚುಚ್ಚಾಗಿ ಅವಶ್ಯಕತೆ, ಇಲ್ಲದಿದ್ದರೂ ಚರ್ಚೆಯ ನೆಪದಲ್ಲಿ, ಕೆಟ್ಟದಾಗಿ ಪ್ರತಿಕ್ರಿಯಿಸುವುದು ಬೇಡ.
  3. ನಾವೆಲ್ಲರೂ ಸ್ನೇಹಿತರು. ಯಾವುದೋ ಒಂದು ಪಕ್ಷದ ಬಗ್ಗೆ ಒಲವಿರಬಹುದು.ಅದರ ಅರ್ಥ ನಾವು ಅದನ್ನು ದೊಡ್ಡಗಂಟಲಿನಲ್ಲಿ ಕೂಗಾಡಿ ಈಗಿರುವ ನಮ್ಮ ಪ್ರೀತಿ, ವಿಶ್ವಾಸಕ್ಕೆ ಧಕ್ಕೆ ಮಾಡಿಕೊಳ್ಳುವುದು ಬೇಡ.
  4. ಈ ಪಕ್ಷ ಬಂದರೆ ಹಾಗೆ, ಆ ಪಕ್ಷ ಬಂದರೆ ಹೀಗೆ ಎಂದು ನಮ್ಮೊಳಗೆ ಕಚ್ಚಾಡುವುದು ಬೇಡ. ಅಂತಹ ಕ್ರಾಂತಿಕಾರಿ ಬದಲಾವಣೆ ಈ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ.
  5. ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಿ. ತುಂಬಾ ಸಂತೋಷ. ಆದರೆ ಸಭ್ಯತೆಯ ಗೆರೆ ದಾಟದೆ, ನಾವೇ ಸರಿ ಎಂದು ಹಠಮಾಡದೆ, ದುರಹಂಕಾರ ಪ್ರದರ್ಶಿಸದೆ ನಮ್ಮ ಅಭಿಪ್ರಾಯ ಒಪ್ಪಲೇ ಬೇಕು ಎಂದು ಒತ್ತಡ ಹೇರದೆ ನಗುನಗುತ್ತಾ ಪ್ರತಿಕ್ರಿಯಿಸಿ.
  6. ಸೋಷಿಯಲ್‌ ಮೀಡಿಯಾಗಳಲ್ಲಿ,ಎಷ್ಟೋ ಸಾಮಾಜಿಕ, ಕೌಟುಂಬಿಕ ಹಳೆಯ ಸ್ನೇಹಿತರು ನಮ್ಮ ದೂರದ ಸಂಬಂಧಿಕರು, ನಮ್ಮ ಧರ್ಮದವರು, ನಮ್ಮ ಊರಿನವರು ಹೀಗೆ ನಾನಾ ಗುಂಪುಗಳಿವೆ. ಈ ಚುನಾವಣಾ ಸಮಯದಲ್ಲಿ ಕೇವಲ ಯಾರೋ ಸ್ವಾರ್ಥಿಗಳ ರಾಜಕೀಯ ದಾಳಗಳಾಗುವುದು ಬೇಡ.
  7. ಟಿವಿಗಳಲ್ಲಿ ಅಜನ್ಮ ಶತ್ರುಗಳಂತೆ ಜಗಳವಾಡುವ ಈ ರಾಜಕೀಯ ನಾಯಕರು ಕಾರ್ಯಕ್ರಮ ಮುಗಿದ ನಂತರ ನಿರೂಪಕನನ್ನೂ ಕರೆದುಕೊಂಡು ರಾತ್ರಿ ಊಟಕ್ಕೆ ಹೋಟೆಲ್ಗೆ{ ತುಂಡು ಗುಂಡು } ಹೋಗುವುದು ಬಹಳಷ್ಟು ಇದೆ.
  8. ಸೀರೆ, ಪಂಚೆ, ಮಿಕ್ಸಿ, ಕುಕ್ಕರ್, ದುಡ್ಡು, ಬಾಡು ಬಾರುಗಳಿಗಿರುವ ಓಟಿನ ಶಕ್ತಿ, ಸುಳ್ಳು ಮತ್ತು ಆಕರ್ಷಕ ಮಾತುಗಳಿಗಿರುವ ಓಟು ಸೆಳೆಯುವ‌ ಆಕರ್ಷಣೆ ಖಂಡಿತ ನಮ್ಮಅಭಿಪ್ರಾಯಗಳಿಗೆ ಇಲ್ಲ. ಆದ್ದರಿಂದ ದಯವಿಟ್ಟು ನಾವು ಚುನಾವಣಾ ಕಾರಣದಿಂದ ನಾವುಗಳು ಮನಸ್ತಾಪ ಮಾಡಿಕೊಳ್ಳುವುದು ಬೇಡ. ನಾವೆಲ್ಲರೂ ಸಾಮಾನ್ಯರು. ದ್ವೇಷಕ್ಕಿಂತ ಪ್ರೀತಿವಿಶ್ವಾಸವೇ ಮುಖ್ಯ ನೆನಪಿರಲಿ.

ಚುನಾವಣೆ ಒಂದು ಗುಪ್ತ ಮತದಾನ. ಒಂದಷ್ಟುಯೋಚಿಸಿ ಅದರಲ್ಲಿ ಭಾಗವಹಿಸಿ. ಯಾರೋ ಅನಾಗರಿಕರಂತೆ , ಜೈಕಾರ ಹಾಕುವುದು ಪುಡಾರಿಗಳಂತೆ ವರ್ತಿಸುವುದು ಬೇಡ, ಹಾಗೂ ನಮ್ಮ ಓಟಿನ ಮಹತ್ವವನ್ನು ಅರಿತು ಸಾಧ್ಯವಾದಮಟ್ಟಿಗೆ ಒಳ್ಳೆಯ ಅಭ್ಯರ್ಥಿಗಳನ್ನೇ, ಆರಿಸಲು ಮತ ಚಲಾಯಿಸೋಣ. ನಮ್ಮ ಮುಂದಿನ ಪೀಳಿಗೆಗೆ ಸದೃಢ ರಾಷ್ಟ್ರದ ಕನಸು ಕಟ್ಟೋಣ. ಹಾಗೂ ಎಂದಿನಂತೆ ಗೆಳೆತನದ ಘನತೆಯನ್ನುಕಾಪಾಡೋಣ.

ಬರಹ :
ವಿವೇಕಾನಂದ ಆಚಾರ್ಯ
ArmyRtd 🇮🇳
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

17 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

18 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago