Advertisement
MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

9 minutes ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago