MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

Advertisement

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

Advertisement

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?

ಗ್ರಾಮೀಣ ಮತ್ತು ಸಣ್ಣ ನಗರ ಪ್ರದೇಶಗಳಲ್ಲಿ ಹಲಸಿನ ಮೌಲ್ಯ ವರ್ಧನೆ ಘಟಕಗಳು ಕಾರ್ಯನಿರ್ವಹಿಸುತ್ತಿವೆ.…

1 hour ago

ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ…

6 hours ago

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು.…

6 hours ago

ರಾಜ್ಯದಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ

ವಿದ್ಯುತ್ ಉತ್ಪಾದನೆಯಲ್ಲಿ ದೇಶದಲ್ಲಿ ರಾಜ್ಯದ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…

6 hours ago

ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?

ಮಲೆನಾಡು ಕರಾವಳಿಯ ಪ್ರದೇಶದ ಸರ್ಕಾರಿ ಶಾಲೆಗೆ ಹೋಗುವ ಅನೇಕ ಮಕ್ಕಳು ಹಳ್ಳ-ಹೊಳೆ ದಾಟಬೇಕು,…

6 hours ago