Advertisement
MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

Advertisement
Advertisement

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

8 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

1 day ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

1 day ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

1 day ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

1 day ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

1 day ago