Advertisement
MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago