ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.
ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು ಅಡಿಕೆ ಹಾನಿಕಾರಕ ಎಂಬ ಗುಮ್ಮ.
ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ. ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ. ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.
ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್ ಐ ಈ ಕ್ರಮ ಕೈಗೊಳ್ಳುತ್ತಿದೆ.
ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್ ಹೇಳುತ್ತಾರೆ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…