Advertisement
MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

8 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

10 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago