Advertisement
MIRROR FOCUS

ಅಡಿಕೆಗೆ ಇನ್ನೊಂದು ಹೆಜ್ಜೆ | ಹಾನಿಕಾರಕ ಭೀತಿ ಹೋಗಲಾಡಿಸಲು ಮಹತ್ವದ ಹೆಜ್ಜೆ |

Share

ಅಡಿಕೆ ಹಾನಿಕಾರಕ ಎಂಬ ಗುಮ್ಮ ಕಳೆದ ಹಲವು ಸಮಯಗಳಿಂದ ಇದೆ. ಅಡಿಕೆ ಜಗಿದರೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎನ್ನುವ ಆರೋಪ ಇದೆ. ಇದಕ್ಕಾಗಿ ಕಳೆದ ಹಲವಾರು ಸಮಯಗಳಿಂದ ಚರ್ಚೆ ನಡೆಯುತ್ತಲೇ ಇದೆ. ಇದೀಗ ಸಿಪಿಸಿಆರ್‌ಐ ಈ ಬಗ್ಗೆ ಬೆಳೆಗಾರರಿಗೆ ಪ್ರಯೋಜನವಾಗುವ ಹೆಜ್ಜೆಯೊಂದಕ್ಕೆ ಇಳಿದಿದೆ.

ಅಡಿಕೆ ಸಾಕಷ್ಟು ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ಈಗ ಧಾರಣೆಯ ಕಾರಣದಿಂದ ವಿಸ್ತರಣೆಯೂ ಆಗುತ್ತಿದೆ. ಅಡಿಕೆ ಬೆಳೆಯುವ ಶೇ.90 ರಷ್ಟು ಜಗಿಯಲು ಬಳಕೆಯಾಗುತ್ತದೆ. ಅಡಿಕೆ ಮಾರಾಟ ನಂತರ ಏನಾಗುತ್ತದೆ ಎನ್ನುವುದೂ ಬೆಳೆಗಾರರಿಗೆ ತಿಳಿಯುತ್ತಿಲ್ಲ. ಆದರೆ ಬಹುಪಾಲು ಅಡಿಕೆ ಜಗಿಯಲೇ ಬಳಕೆಯಾಗುತ್ತದೆ. ಅಡಿಕೆಯ ಪರ್ಯಾಯ ಬಳಕೆಯ ಬಗ್ಗೆ ಇನ್ನೂ ಅಧ್ಯಯನಗಳು ಸಾಕಾಗಿಲ್ಲ. ಆದರೆ ಇದಕ್ಕೆಲ್ಲಾ ಅಡ್ಡಿ ಇರುವುದು  ಅಡಿಕೆ ಹಾನಿಕಾರಕ ಎಂಬ ಗುಮ್ಮ.

ಈ ನಿಟ್ಟಿನಲ್ಲಿ ಕಳೆದ ಹಲವು ಸಮಯಗಳಿಂದ ಚರ್ಚೆ ಆಗುತ್ತಿದೆ. ಇದೀಗ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಭಯ ನಿವಾರಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಿದ್ದಾರೆ.  ಇದೇ ತಿಂಗಳಲ್ಲಿ ಅಡಿಕೆಯ ಬಗ್ಗೆ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪ್ರಮುಖರು ಭಾಗವಹಿಸುತ್ತಾರೆ. ಪ್ರಮುಖ ಸಂಸ್ಥೆಗಳಿಂದ ಸುಮಾರು 25 ವೈದ್ಯರು ಆಗಮಿಸುತ್ತಾರೆ. ಅಡಿಕೆ ಮಾತ್ರವೇ ತಿಂದರೆ ಏನಾಗುತ್ತದೆ..? ಅಡಿಕೆ ಜೊತೆಗೆ ಇತರ ವಸ್ತುಗಳನ್ನು ಬಳಕೆ ಮಾಡಿದರೆ ಏನಾಗುತ್ತದೆ..? ಇತ್ಯಾದಿಗಳ ಬಗ್ಗೆ ಚರ್ಚೆ ಹಾಗೂ ಅಧ್ಯಯನ ನಡೆಸಲಾಗುತ್ತದೆ.  ಅಡಿಕೆಯ ಸಾಧ್ಯತೆಗಳ ಬಗ್ಗೆ ಕ್ಲಿನಿಕಲ್‌ ಆಗಿರುವ ಮಾಹಿತಿಯನ್ನು ಪಡೆಯಲಾಗುತ್ತದೆ.

ಕೇವಲ ಅಡಿಕೆಯನ್ನು ಜಗಿದರೆ ಯಾವುದೇ ಹಾನಿಯಾಗುವುದಿಲ್ಲ ಎನ್ನುವ ವರದಿಯ ಮೂಲಕ ಅಡಿಕೆಯ ಬೇರೆ ಬೇರೆ ಉತ್ಪನ್ನಗಳು ತಯಾರಾಗಬೇಕಿದೆ. ಅಡಿಕೆ ಜಗಿಯುವುದಕ್ಕಿಂತಲೂ ಅಡಿಕೆಯ ಪರ್ಯಾಯ ಉತ್ಪನ್ನಗಳು ತಯಾರಾಗಬೇಕಿದೆ. ಇದಕ್ಕಾಗಿ ಅಡಿಕೆ ಹಾನಿಕಾರಕ ಎಂಬ ಅಂಶ ದೂರವಾಗಬೇಕಿದೆ. ಈ ಹೆಜ್ಜೆ ಇದೀಗ ಮಹತ್ವದ್ದಾಗಿದೆ. ಸಿಪಿಸಿಆರ್‌ ಐ ಈ ಕ್ರಮ ಕೈಗೊಳ್ಳುತ್ತಿದೆ.

ಅಡಿಕೆ ಎಷ್ಟೇ ಉತ್ಪಾದನೆಯಾದರೂ ಅಡಿಕೆಯ ಬಳಕೆ ಅದೇ ಪ್ರಮಾಣದಲ್ಲಿ ಆಗಬೇಕಿದೆ. ಅದು ಜಗಿಯುವುದು  ಮಾತ್ರಾ ಅಲ್ಲ, ಅದರ ಹೊರತಾದ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ವಿಜ್ಞಾನಿಗಳು ವೈದ್ಯರು ಜೊತೆಯಾಗಿ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದು ಸಿಪಿಸಿಆರ್‌ಐ ನಿರ್ದೇಶಕ ಡಾ.ಕೆ ಬಾಲಚಂದ್ರ ಹೆಬ್ಬಾರ್‌ ಹೇಳುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

2 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

10 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

12 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

17 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

19 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago