#AgriTourism | ಕೃಷಿ ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ಕೃಷಿ ಆಶ್ರಮದ ಮತ್ತೊಂದು ಕಾರ್ಯಕ್ರಮ | ಕೃಷಿಯ ಆಸಕ್ತರಿಗಾಗಿ ವಿಶೇಷ ಕಾರ್ಯಗಾರ |

September 18, 2023
3:07 PM
"ಕೃಷಿ ಆಶ್ರಮ" ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೇ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು, ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢ ವಾಗಬೇಕು. ಕೃಷಿಕ ಮತ್ತು ಕೃಷಿ ಮತ್ತೆ ಚಿಗುರಬೇಕು. ಭಾರತ ಮತ್ತೆ ಕೃಷಿ ಪ್ರಧಾನ ದೇಶವಾಗಬೇಕು. ಇಲ್ಲಿನ ಜನರು ಹೆಚ್ಚು ಆರೋಗ್ಯವಂತರು, ಸಂಸ್ಕೃತಿವಂತರಾಗಬೇಕು. ಈ ಉದ್ದೇಶದಿಂದ ಈ ಎರಡು ದಿನಗಳ "ಕೃಷಿ ಆಶ್ರಮ ತರಬೇತಿ ಶಿಬಿರ" ಆಯೋಜಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ (Agri Tourism)  ಅನ್ನು ಕರ್ನಾಟಕದಲ್ಲಿಯೂ ಬೆಳೆಸುವ ಇಚ್ಛೆ ಇದೆ. ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಆಶ್ರಮ) ಕೃಷಿ ಆಶ್ರಮದ ಮೊಗದೊಂದು ಕಾರ್ಯಕ್ರಮ, ಅಕ್ಟೋಬರ್ 1 (ಭಾನುವಾರ) ಹಾಗೂ 2 (ಸೋಮವಾರ) ರಂದು ಸಾಗರದ ಬಳಿ ಆಯೋಜಿಸಲಾಗಿದೆ.

Advertisement
Advertisement

ಸಾವಯವ ಕೃಷಿಕರಿಗಾಗಿ ಮತ್ತು ಸಾವಯವ ಕೃಷಿಯ ಆಸಕ್ತರಿಗಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳು: 01.10.2023: ಸಾರ ಸಂಸ್ಥೆ. ಬಟ್ಟೆಮಲ್ಲಪ್ಪ. ಹೊಸನಗರ ತಾ. ಶಿವಮೊಗ್ಗ ಜಿಲ್ಲೆ.

Advertisement

02.10.2023 ರಂದು ಸಾಗರ ಬಳಿಯ ಪ್ರಕಾಶ ಮಂಚಾಲೆ ಅವರ ಔಷಧೀಯ ಸಸ್ಯಗಳ ತೋಟದಲ್ಲಿ ಗೆಳೆಯರೇ “ಕೃಷಿ ಆಶ್ರಮ” ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೆ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢವಾಗಬೇಕು. ಕೃಷಿಕ ಮತ್ತು ಕೃಷಿ ಮತ್ತೆ ಚಿಗುರಬೇಕು. ಭಾರತ ಮತ್ತೆ ಕೃಷಿ ಪ್ರಧಾನ ದೇಶವಾಗಬೇಕು. ಇಲ್ಲಿನ ಜನರು ಹೆಚ್ಚು ಆರೋಗ್ಯವಂತರು, ಸಂಸ್ಕೃತಿವಂತರಾಗಬೇಕು. ಈ ಉದ್ದೇಶದಿಂದ ಈ ಎರಡು ದಿನಗಳ “ಕೃಷಿ ಆಶ್ರಮ ತರಬೇತಿ ಶಿಬಿರ” ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:
ಕೃಷಿ ಆಶ್ರಮಕ್ಕೆ ಭವಿಷ್ಯವಿದೆಯೇ? ಅಲ್ಲಿ ಇರಬೇಕಾದ ವಸ್ತುಗಳೇನು? ಇರಬಾರದ ವಸ್ತುಗಳಾವುವು? ಕೃಷಿ ಆಶ್ರಮ ಎಂದರೇನು?  ಕೃಷಿ ಆಶ್ರಮ ಪರಿಕಲ್ಪನೆ, ಉದ್ದೇಶ ಮತ್ತು ಅಗತ್ಯಗಳೇನು?  ಅದರ ಸ್ಥಾಪನೆಗೆ ಸಿದ್ಧತೆ ಹೇಗೆ?  ಆಶ್ರಮ ತೆರೆಯಲು ಎಷ್ಟು ವೆಚ್ಚ ಬಂದೀತು ?  ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯಬೇಕು?  ನಿಬಂಧನೆಗಳು ಯಾವುವು?  ಕೃಷಿ ಆಶ್ರಮದ ಲಾಭಗಳೇನು?

Advertisement

“ಹಳ್ಳಿಯ ಸಂಪನ್ಮೂಲಗಳಿಂದ ಮೌಲ್ಯವರ್ಧನೆಯ ಸಾಧ್ಯತೆಗಳು”, ” ಕೃಷಿ ಆಶ್ರಮದಲ್ಲಿ ಆರೋಗ್ಯಕರ ದಿನಚರಿ ಹೇಗೆ ಇರಬೇಕು ಮತ್ತು ಯಾಕೆ?” , ಸಣ್ಣ ರೈತರು ಕೃಷಿಯಲ್ಲಿ ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು? , ಸಣ್ಣ ಜಾಗದಲ್ಲಿ ವಾರ್ಷಿಕ ದ್ವಿವಾರ್ಷಿಕ, ತ್ರಿವಾರ್ಷಿಕ & ಬಹುವಾರ್ಷಿಕ ಬೆಳೆಗಳನ್ನು ಜೋಡಿಸುವ ಕ್ರಮವನ್ನು ವೀಕ್ಷಿಸುವುದು , ಶತಮೂಲಿಕ ವನ ನಿರ್ಮಾಣದ ಬಗ್ಗೆ ತಿಳಿಯುವುದು , ಕಾಡು ಮಾದರಿಯ ತೋಟದ ನಿರ್ಮಾಣದ ಬಗ್ಗೆ ವಿವರವಾದ ನೋಟ , ನೀರಿಲ್ಲದೆ, ಸ್ವಲ್ಪ ನೀರಿದ್ದಾಗ ಮತ್ತು ನೀರು ಅವಲಂಬಿತ ಕೃಷಿ ಹೇಗೆ ಮಾಡುವುದು ಎಂದು ತಿಳಿಯಲು , ದೀರ್ಘಾವಧಿ ಬೆಳೆಗಳ ಮಧ್ಯದಲ್ಲಿ ಆಯುರ್ವೇದ ಅಥವಾ ಔಷಧೀಯ ಸಸ್ಯಗಳ ಸಂಯೋಜನೆ , ಔಷಧೀಯ ಸಸ್ಯಗಳ ಬಳಕೆ ಮತ್ತು ಉತ್ಪನ್ನಗಳ ತಯಾರಿಕೆ , ಮಣ್ಣು ಹವಾಮಾನ ತಾಪಮಾನದ ಅನುಗುಣವಾಗಿ ಕೃಷಿ ವಿಧಾನಗಳು ಇತ್ಯಾದಿ ಸಂಗತಿಗಳ ಬಗ್ಗೆ ಮಾತುಕತೆ ನಡೆಯಲಿದೆ.

ಆಸಕ್ತರು ಮತ್ತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಫೋನ್ ನಂಬರ್ ಗೆ ಸಂಪರ್ಕಿಸಿ ನೊಂದಣಿ ಮಾಡಿಸಿಕೊಳ್ಳಿ . ಕೇವಲ 50 ಮಂದಿಗೆ ಮಾತ್ರ ಅವಕಾಶ (ಇಷ್ಟು ಮಂದಿಗೆ ರಾತ್ರಿ ತಂಗಲು ವ್ಯವಸ್ಥೆ ಇದೆ). ಮೊದಲು ಪ್ರತಿಕ್ರಿಯೆ ನೀಡಿದವರಿಗೆ ಆದ್ಯತೆ. ನೊಂದಾಯಿತರಿಗೆ ಮಾತ್ರ ಅವಕಾಶ ಶುಲ್ಕ: 900/- 2 ದಿನಗಳಿಗೆ ವಸತಿ ಸಹಿತ 7259588743 ಫೋನ್ ಪೇ / ಗೂಗಲ್ ಪೇ ಸಂಪರ್ಕಿಸಿ: 7259588743 9916030272 .

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |
May 12, 2024
11:56 AM
by: ಸಾಯಿಶೇಖರ್ ಕರಿಕಳ
ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಪುತ್ತೂರಿನಲ್ಲಿ ಹಲಸು ಹಣ್ಣು ಮೇಳದ ಏಳನೇ ಆವೃತ್ತಿ : ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ
May 12, 2024
11:34 AM
by: The Rural Mirror ಸುದ್ದಿಜಾಲ
ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ
May 12, 2024
11:10 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror