Advertisement
MIRROR FOCUS

#AgriTourism | ಕೃಷಿ ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ಕೃಷಿ ಆಶ್ರಮದ ಮತ್ತೊಂದು ಕಾರ್ಯಕ್ರಮ | ಕೃಷಿಯ ಆಸಕ್ತರಿಗಾಗಿ ವಿಶೇಷ ಕಾರ್ಯಗಾರ |

Share

ಮಹಾರಾಷ್ಟ್ರದಲ್ಲಿ ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ (Agri Tourism)  ಅನ್ನು ಕರ್ನಾಟಕದಲ್ಲಿಯೂ ಬೆಳೆಸುವ ಇಚ್ಛೆ ಇದೆ. ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಆಶ್ರಮ) ಕೃಷಿ ಆಶ್ರಮದ ಮೊಗದೊಂದು ಕಾರ್ಯಕ್ರಮ, ಅಕ್ಟೋಬರ್ 1 (ಭಾನುವಾರ) ಹಾಗೂ 2 (ಸೋಮವಾರ) ರಂದು ಸಾಗರದ ಬಳಿ ಆಯೋಜಿಸಲಾಗಿದೆ.

ಸಾವಯವ ಕೃಷಿಕರಿಗಾಗಿ ಮತ್ತು ಸಾವಯವ ಕೃಷಿಯ ಆಸಕ್ತರಿಗಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳು: 01.10.2023: ಸಾರ ಸಂಸ್ಥೆ. ಬಟ್ಟೆಮಲ್ಲಪ್ಪ. ಹೊಸನಗರ ತಾ. ಶಿವಮೊಗ್ಗ ಜಿಲ್ಲೆ.

02.10.2023 ರಂದು ಸಾಗರ ಬಳಿಯ ಪ್ರಕಾಶ ಮಂಚಾಲೆ ಅವರ ಔಷಧೀಯ ಸಸ್ಯಗಳ ತೋಟದಲ್ಲಿ ಗೆಳೆಯರೇ “ಕೃಷಿ ಆಶ್ರಮ” ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೆ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢವಾಗಬೇಕು. ಕೃಷಿಕ ಮತ್ತು ಕೃಷಿ ಮತ್ತೆ ಚಿಗುರಬೇಕು. ಭಾರತ ಮತ್ತೆ ಕೃಷಿ ಪ್ರಧಾನ ದೇಶವಾಗಬೇಕು. ಇಲ್ಲಿನ ಜನರು ಹೆಚ್ಚು ಆರೋಗ್ಯವಂತರು, ಸಂಸ್ಕೃತಿವಂತರಾಗಬೇಕು. ಈ ಉದ್ದೇಶದಿಂದ ಈ ಎರಡು ದಿನಗಳ “ಕೃಷಿ ಆಶ್ರಮ ತರಬೇತಿ ಶಿಬಿರ” ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:
ಕೃಷಿ ಆಶ್ರಮಕ್ಕೆ ಭವಿಷ್ಯವಿದೆಯೇ? ಅಲ್ಲಿ ಇರಬೇಕಾದ ವಸ್ತುಗಳೇನು? ಇರಬಾರದ ವಸ್ತುಗಳಾವುವು? ಕೃಷಿ ಆಶ್ರಮ ಎಂದರೇನು?  ಕೃಷಿ ಆಶ್ರಮ ಪರಿಕಲ್ಪನೆ, ಉದ್ದೇಶ ಮತ್ತು ಅಗತ್ಯಗಳೇನು?  ಅದರ ಸ್ಥಾಪನೆಗೆ ಸಿದ್ಧತೆ ಹೇಗೆ?  ಆಶ್ರಮ ತೆರೆಯಲು ಎಷ್ಟು ವೆಚ್ಚ ಬಂದೀತು ?  ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯಬೇಕು?  ನಿಬಂಧನೆಗಳು ಯಾವುವು?  ಕೃಷಿ ಆಶ್ರಮದ ಲಾಭಗಳೇನು?

“ಹಳ್ಳಿಯ ಸಂಪನ್ಮೂಲಗಳಿಂದ ಮೌಲ್ಯವರ್ಧನೆಯ ಸಾಧ್ಯತೆಗಳು”, ” ಕೃಷಿ ಆಶ್ರಮದಲ್ಲಿ ಆರೋಗ್ಯಕರ ದಿನಚರಿ ಹೇಗೆ ಇರಬೇಕು ಮತ್ತು ಯಾಕೆ?” , ಸಣ್ಣ ರೈತರು ಕೃಷಿಯಲ್ಲಿ ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು? , ಸಣ್ಣ ಜಾಗದಲ್ಲಿ ವಾರ್ಷಿಕ ದ್ವಿವಾರ್ಷಿಕ, ತ್ರಿವಾರ್ಷಿಕ & ಬಹುವಾರ್ಷಿಕ ಬೆಳೆಗಳನ್ನು ಜೋಡಿಸುವ ಕ್ರಮವನ್ನು ವೀಕ್ಷಿಸುವುದು , ಶತಮೂಲಿಕ ವನ ನಿರ್ಮಾಣದ ಬಗ್ಗೆ ತಿಳಿಯುವುದು , ಕಾಡು ಮಾದರಿಯ ತೋಟದ ನಿರ್ಮಾಣದ ಬಗ್ಗೆ ವಿವರವಾದ ನೋಟ , ನೀರಿಲ್ಲದೆ, ಸ್ವಲ್ಪ ನೀರಿದ್ದಾಗ ಮತ್ತು ನೀರು ಅವಲಂಬಿತ ಕೃಷಿ ಹೇಗೆ ಮಾಡುವುದು ಎಂದು ತಿಳಿಯಲು , ದೀರ್ಘಾವಧಿ ಬೆಳೆಗಳ ಮಧ್ಯದಲ್ಲಿ ಆಯುರ್ವೇದ ಅಥವಾ ಔಷಧೀಯ ಸಸ್ಯಗಳ ಸಂಯೋಜನೆ , ಔಷಧೀಯ ಸಸ್ಯಗಳ ಬಳಕೆ ಮತ್ತು ಉತ್ಪನ್ನಗಳ ತಯಾರಿಕೆ , ಮಣ್ಣು ಹವಾಮಾನ ತಾಪಮಾನದ ಅನುಗುಣವಾಗಿ ಕೃಷಿ ವಿಧಾನಗಳು ಇತ್ಯಾದಿ ಸಂಗತಿಗಳ ಬಗ್ಗೆ ಮಾತುಕತೆ ನಡೆಯಲಿದೆ.

ಆಸಕ್ತರು ಮತ್ತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಫೋನ್ ನಂಬರ್ ಗೆ ಸಂಪರ್ಕಿಸಿ ನೊಂದಣಿ ಮಾಡಿಸಿಕೊಳ್ಳಿ . ಕೇವಲ 50 ಮಂದಿಗೆ ಮಾತ್ರ ಅವಕಾಶ (ಇಷ್ಟು ಮಂದಿಗೆ ರಾತ್ರಿ ತಂಗಲು ವ್ಯವಸ್ಥೆ ಇದೆ). ಮೊದಲು ಪ್ರತಿಕ್ರಿಯೆ ನೀಡಿದವರಿಗೆ ಆದ್ಯತೆ. ನೊಂದಾಯಿತರಿಗೆ ಮಾತ್ರ ಅವಕಾಶ ಶುಲ್ಕ: 900/- 2 ದಿನಗಳಿಗೆ ವಸತಿ ಸಹಿತ 7259588743 ಫೋನ್ ಪೇ / ಗೂಗಲ್ ಪೇ ಸಂಪರ್ಕಿಸಿ: 7259588743 9916030272 .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

50 minutes ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

16 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

16 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago