Advertisement
MIRROR FOCUS

#AgriTourism | ಕೃಷಿ ಪ್ರವಾಸೋದ್ಯಮ ಬೆಳೆಸುವ ನಿಟ್ಟಿನಲ್ಲಿ ಕೃಷಿ ಆಶ್ರಮದ ಮತ್ತೊಂದು ಕಾರ್ಯಕ್ರಮ | ಕೃಷಿಯ ಆಸಕ್ತರಿಗಾಗಿ ವಿಶೇಷ ಕಾರ್ಯಗಾರ |

Share

ಮಹಾರಾಷ್ಟ್ರದಲ್ಲಿ ಈಗಾಗಲೇ ಪ್ರಸಿದ್ಧಿಯಾಗಿರುವ ಅಗ್ರಿ ಟೂರಿಸಂ (Agri Tourism)  ಅನ್ನು ಕರ್ನಾಟಕದಲ್ಲಿಯೂ ಬೆಳೆಸುವ ಇಚ್ಛೆ ಇದೆ. ಕೃಷಿ ಪ್ರವಾಸೋದ್ಯಮ, (ಹಳ್ಳಿ ಪ್ರವಾಸ, ಆಶ್ರಮ) ಕೃಷಿ ಆಶ್ರಮದ ಮೊಗದೊಂದು ಕಾರ್ಯಕ್ರಮ, ಅಕ್ಟೋಬರ್ 1 (ಭಾನುವಾರ) ಹಾಗೂ 2 (ಸೋಮವಾರ) ರಂದು ಸಾಗರದ ಬಳಿ ಆಯೋಜಿಸಲಾಗಿದೆ.

ಸಾವಯವ ಕೃಷಿಕರಿಗಾಗಿ ಮತ್ತು ಸಾವಯವ ಕೃಷಿಯ ಆಸಕ್ತರಿಗಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳು: 01.10.2023: ಸಾರ ಸಂಸ್ಥೆ. ಬಟ್ಟೆಮಲ್ಲಪ್ಪ. ಹೊಸನಗರ ತಾ. ಶಿವಮೊಗ್ಗ ಜಿಲ್ಲೆ.

02.10.2023 ರಂದು ಸಾಗರ ಬಳಿಯ ಪ್ರಕಾಶ ಮಂಚಾಲೆ ಅವರ ಔಷಧೀಯ ಸಸ್ಯಗಳ ತೋಟದಲ್ಲಿ ಗೆಳೆಯರೇ “ಕೃಷಿ ಆಶ್ರಮ” ಎಂದರೆ ಅಗ್ರಿ ಟೂರಿಸಂ. ಈ ಯೋಜನೆಯ ಉದ್ದೇಶ ಜನರು ಮತ್ತೆ ಪಟ್ಟಣಗಳಿಂದ ಹಳ್ಳಿಗಳತ್ತ ಮುಖ ಮಾಡಬೇಕು ಹಳ್ಳಿಗಳು ಉಳಿಯಬೇಕು, ಹಳ್ಳಿಗಳ ಆರ್ಥಿಕತೆ ಸದೃಢವಾಗಬೇಕು. ಕೃಷಿಕ ಮತ್ತು ಕೃಷಿ ಮತ್ತೆ ಚಿಗುರಬೇಕು. ಭಾರತ ಮತ್ತೆ ಕೃಷಿ ಪ್ರಧಾನ ದೇಶವಾಗಬೇಕು. ಇಲ್ಲಿನ ಜನರು ಹೆಚ್ಚು ಆರೋಗ್ಯವಂತರು, ಸಂಸ್ಕೃತಿವಂತರಾಗಬೇಕು. ಈ ಉದ್ದೇಶದಿಂದ ಈ ಎರಡು ದಿನಗಳ “ಕೃಷಿ ಆಶ್ರಮ ತರಬೇತಿ ಶಿಬಿರ” ಆಯೋಜಿಸಲಾಗಿದೆ.

ಕಾರ್ಯಕ್ರಮದ ವಿವರ:
ಕೃಷಿ ಆಶ್ರಮಕ್ಕೆ ಭವಿಷ್ಯವಿದೆಯೇ? ಅಲ್ಲಿ ಇರಬೇಕಾದ ವಸ್ತುಗಳೇನು? ಇರಬಾರದ ವಸ್ತುಗಳಾವುವು? ಕೃಷಿ ಆಶ್ರಮ ಎಂದರೇನು?  ಕೃಷಿ ಆಶ್ರಮ ಪರಿಕಲ್ಪನೆ, ಉದ್ದೇಶ ಮತ್ತು ಅಗತ್ಯಗಳೇನು?  ಅದರ ಸ್ಥಾಪನೆಗೆ ಸಿದ್ಧತೆ ಹೇಗೆ?  ಆಶ್ರಮ ತೆರೆಯಲು ಎಷ್ಟು ವೆಚ್ಚ ಬಂದೀತು ?  ಅಲ್ಲಿ ಯಾವ ಯಾವ ಚಟುವಟಿಕೆಗಳು ನಡೆಯಬೇಕು?  ನಿಬಂಧನೆಗಳು ಯಾವುವು?  ಕೃಷಿ ಆಶ್ರಮದ ಲಾಭಗಳೇನು?

“ಹಳ್ಳಿಯ ಸಂಪನ್ಮೂಲಗಳಿಂದ ಮೌಲ್ಯವರ್ಧನೆಯ ಸಾಧ್ಯತೆಗಳು”, ” ಕೃಷಿ ಆಶ್ರಮದಲ್ಲಿ ಆರೋಗ್ಯಕರ ದಿನಚರಿ ಹೇಗೆ ಇರಬೇಕು ಮತ್ತು ಯಾಕೆ?” , ಸಣ್ಣ ರೈತರು ಕೃಷಿಯಲ್ಲಿ ಹೇಗೆ ಬದುಕನ್ನು ಕಟ್ಟಿಕೊಳ್ಳಬಹುದು? , ಸಣ್ಣ ಜಾಗದಲ್ಲಿ ವಾರ್ಷಿಕ ದ್ವಿವಾರ್ಷಿಕ, ತ್ರಿವಾರ್ಷಿಕ & ಬಹುವಾರ್ಷಿಕ ಬೆಳೆಗಳನ್ನು ಜೋಡಿಸುವ ಕ್ರಮವನ್ನು ವೀಕ್ಷಿಸುವುದು , ಶತಮೂಲಿಕ ವನ ನಿರ್ಮಾಣದ ಬಗ್ಗೆ ತಿಳಿಯುವುದು , ಕಾಡು ಮಾದರಿಯ ತೋಟದ ನಿರ್ಮಾಣದ ಬಗ್ಗೆ ವಿವರವಾದ ನೋಟ , ನೀರಿಲ್ಲದೆ, ಸ್ವಲ್ಪ ನೀರಿದ್ದಾಗ ಮತ್ತು ನೀರು ಅವಲಂಬಿತ ಕೃಷಿ ಹೇಗೆ ಮಾಡುವುದು ಎಂದು ತಿಳಿಯಲು , ದೀರ್ಘಾವಧಿ ಬೆಳೆಗಳ ಮಧ್ಯದಲ್ಲಿ ಆಯುರ್ವೇದ ಅಥವಾ ಔಷಧೀಯ ಸಸ್ಯಗಳ ಸಂಯೋಜನೆ , ಔಷಧೀಯ ಸಸ್ಯಗಳ ಬಳಕೆ ಮತ್ತು ಉತ್ಪನ್ನಗಳ ತಯಾರಿಕೆ , ಮಣ್ಣು ಹವಾಮಾನ ತಾಪಮಾನದ ಅನುಗುಣವಾಗಿ ಕೃಷಿ ವಿಧಾನಗಳು ಇತ್ಯಾದಿ ಸಂಗತಿಗಳ ಬಗ್ಗೆ ಮಾತುಕತೆ ನಡೆಯಲಿದೆ.

ಆಸಕ್ತರು ಮತ್ತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗಿನ ಫೋನ್ ನಂಬರ್ ಗೆ ಸಂಪರ್ಕಿಸಿ ನೊಂದಣಿ ಮಾಡಿಸಿಕೊಳ್ಳಿ . ಕೇವಲ 50 ಮಂದಿಗೆ ಮಾತ್ರ ಅವಕಾಶ (ಇಷ್ಟು ಮಂದಿಗೆ ರಾತ್ರಿ ತಂಗಲು ವ್ಯವಸ್ಥೆ ಇದೆ). ಮೊದಲು ಪ್ರತಿಕ್ರಿಯೆ ನೀಡಿದವರಿಗೆ ಆದ್ಯತೆ. ನೊಂದಾಯಿತರಿಗೆ ಮಾತ್ರ ಅವಕಾಶ ಶುಲ್ಕ: 900/- 2 ದಿನಗಳಿಗೆ ವಸತಿ ಸಹಿತ 7259588743 ಫೋನ್ ಪೇ / ಗೂಗಲ್ ಪೇ ಸಂಪರ್ಕಿಸಿ: 7259588743 9916030272 .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

3 hours ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

3 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

4 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

9 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

12 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

16 hours ago