Advertisement
ಸುದ್ದಿಗಳು

ಕೋಳಿ ಸಾಕಾಣಿಕೆಯ ಉತ್ತೇಜನಕಾರಿ ನೋಟ – ಸ್ವಾವಲಂಬನೆಯ ದಾರಿಯ ಹೆಜ್ಜೆಗಳು | ಸಂಜೀವಿನಿ ತಂಡ-ಕೃಷಿ ಇಲಾಖೆಯಿಂದ ಅಧ್ಯಯನ ಪ್ರವಾಸ |

Share

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಹೊಸಳ್ಳಿ ಗ್ರಾಮದ ಕಾವೇರಿ ಮಂಜುನಾಥ  ಅವರು ನಡೆಸಿ ಕೋಳಿ ಸಾಕಾಣಿಕೆಯಲ್ಲಿ ಯಶಸ್ವಿಯಾಗಿ  ಸ್ವಾವಲಂಬನೆ ಹಾಗೂ  ಸ್ಥಿರ ಆದಾಯವು ಇತರ ಕೃಷಿಕರಿಗೂ ಮಾದರಿಯಾಗಿದೆ. ಈಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಮಂಗಳೂರು ತಾಲೂಕಿನ ಆತ್ಮ ಯೋಜನೆಯಡಿ ಆಯೋಜನೆ ಮಾಡಲಾದ ಯಶಸ್ವಿ ಕೃಷಿ ಉದ್ಯಮದ ಅಧ್ಯಯನ ಪ್ರವಾಸದ ವೇಳೆ ಈ ಮಾದರಿ ಕೃಷಿ ಕ್ಷೇತ್ರವನ್ನು ಭೇಟಿ ಮಾಡಿದರು.

ಮಂಜುನಾಥ  ಅವರು ದುರ್ಗಾದೇವಿ ಸಂಜೀವಿನಿ ಮಹಿಳಾ ಸ್ವ ಸಹಾಯ ಸಂಘದ ಪ್ರೋತ್ಸಾಹ, MBK ಮೇಘನಾ, ಹಾಗೂ NRLM ತಂಡದ ಸತತ ಮಾರ್ಗದರ್ಶನ ಹಾಗೂ ತಾಲೂಕು ಪಶುವೈದ್ಯಾಧಿಕಾರಿ  ಪ್ರಕಾಶ್ ಅವರ ತಾಂತ್ರಿಕ ಸಲಹೆಗಳೊಂದಿಗೆ BV-300 ಲೆಯರ್ ಕೋಳಿ ಸಾಕಾಣಿಕೆ ಯೋಜನೆ ಯಶಸ್ವಿಯಾಗಿ ಅಳವಡಿಸಿದ್ದರು.

ಕಾವೇರಿ ಮಂಜುನಾಥ ಅವರು 500 BV-300 ಜಾತಿಯ 21 ವಾರದ ಕೋಳಿ ಮರಿಗಳನ್ನು ಪ್ರತಿ ಕೋಳಿಗೂ ₹350 ದರದಲ್ಲಿ ತರಿಸಿಕೊಂಡರು. BV-300 ಜಾತಿ ಕಡಿಮೆ ವೆಚ್ಚದಲ್ಲಿ ಹೆಚ್ಚು ಮೊಟ್ಟೆ ಉತ್ಪಾದನೆಯ ಸಾಮರ್ಥ್ಯ ಹೊಂದಿದ್ದು, ಗ್ರಾಮೀಣ ಮಹಿಳೆಯರ ಆದಾಯ ವೃದ್ಧಿಗೆ ಉತ್ತಮ ಆಯ್ಕೆಯಾಗುವ ಮೂಲಕ ಹೆಸರು ಮಾಡಿದೆ.

ಯೋಜನೆ ಪ್ರಾರಂಭದ ಸಮಯದಲ್ಲಿ 8 ಕೋಳಿಗಳು ಸತ್ತುಹೋಗಿದ್ದರೂ,  ಬಿಸಿಲಿನ ತಾಪಮಾನದಿಂದ 4 ಹಾಗೂ  ನೆಟ್‌ಗೆ ಕುತ್ತಿಗೆ ಸಿಕ್ಕಿ  4 ಕೋಳಿ ಸತ್ತಿದ್ದವು. ಉಳಿದ ಕೋಳಿಗಳ ಆರೋಗ್ಯ ಉತ್ತಮವಾಗಿ ಸ್ಥಿರಗೊಂಡು ಉತ್ತಮ ಉತ್ಪಾದನೆ ನೀಡುವ ಮಟ್ಟಕ್ಕೇರಿದೆ. ದಿನಕ್ಕೆ 60 ಕೆಜಿ ಆಹಾರ ವಿವಿಧ ಸಂಯೋಜನೆಯೊಂದಿಗೆ ನೀಡಲಾಗುತ್ತದೆ. ಪ್ರತಿ ಕೋಳಿಗೆ ದಿನಕ್ಕೆ 120 ಗ್ರಾಂ ಆಹಾರ ನೀಡಲಾಗುತ್ತಿದ್ದು, ವಾರಕ್ಕೊಮ್ಮೆ 250 ml ಟಾನಿಕ್ ಮಿಶ್ರಣ ಮಾಡುವುದರಿಂದ ಕೋಳಿಗಳ ಆರೋಗ್ಯ ಉತ್ತಮವಾಗಿದೆ ಎಂದು ಮಂಜುನಾಥ ಹೇಳುತ್ತಾರೆ.  ಮೊಟ್ಟೆ ಉತ್ಪಾದನೆ ಹೆಚ್ಚಿಸಲು ದಿನಕ್ಕೆ 8 ಗಂಟೆಗಳ ಡಾರ್ಕ್ನೆಸ್ ಒದಗಿಸಲಾಗಿದೆ.  ಮೊಟ್ಟೆ ಉತ್ಪಾದನೆಯಲ್ಲಿ ಕೂಡಾ  ಗಣನೀಯ ಸಾಧನೆ ಮಾಡಿದ್ದಾರೆ.

BV-300 ಜಾತಿಯ ಪ್ರಮುಖ ವಿಶೇಷತೆಗಳೆಂದರೆ,  5 ದಿನ ಮೊಟ್ಟೆ ನೀಡುತ್ತದೆ.  ಒಂದು ಜೀವನಚಕ್ರದಲ್ಲಿ 300 ಮೊಟ್ಟೆಗಳವರೆಗೆ ಉತ್ಪಾದನೆ ಮಾಡುತ್ತದೆ.  ಮುಂಜಾನೆ 9 ಗಂಟೆಯೊಳಗೆ ಮೊಟ್ಟೆ ಇಡುವ ಸಹಜ ಸ್ವಭಾವ ಇಲ್ಲಿದೆ. ಈ ಯೋಜನೆಯಡಿ ಉತ್ಪಾದನೆಯಾಗುವ ಮೊಟ್ಟೆಗಳನ್ನು 7 ಶಾಲೆಗಳಿಗೆ ಪ್ರತಿ ಮೊಟ್ಟೆ ₹5.25 ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಇದು ಸಂಘಕ್ಕೆ ನಿಯಮಿತ, ಖಚಿತ ಮತ್ತು ನಿರಂತರ ಆದಾಯದ ಹರಿವನ್ನು ನೀಡುತ್ತಿದೆ.

ವಯಸ್ಸಾದ ಕೋಳಿಗಳನ್ನು ₹150–₹200 ದರದಲ್ಲಿ ಮಾರಾಟ ಮಾಡಲಾಗುತ್ತಿದೆ.  ಶಾಲೆಗಳಿಗೆ ಮೊಟ್ಟೆ ಪೂರೈಕೆ, ಜೀವಂತ ಕೋಳಿ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಲಾಗುತ್ತಿದ್ದು, ಎಲ್ಲವೂ ಸ್ಥಳೀಯ ಬೇಡಿಕೆಯೇ ಪೂರೈಕೆ ಮಾಡಲಾಗುತ್ತಿದೆ.  ಈ  ಎಲ್ಲ ಮೂಲಗಳಿಂದಾಗಿ ಕಾವೇರಿ ಮಂಜುನಾಥ ಅವರ ಕುಟುಂಬಕ್ಕೆ ಸ್ಥಿರ ಆದಾಯ ದೊರೆತಿದೆ.

ಮುಧೋಳ ತುಂಗಭದ್ರಾ ಸಂಜೀವಿನಿ ಸ್ವ ಸಹಾಯ ಸಂಘ, ಲಕ್ಷ್ಮೀದೇವಿ ಛಲವಾದಿ, ಯಲಬುರ್ಗಾ ತಾಲೂಕು ಕೊಪ್ಪಳ ಜಿಲ್ಲೆಯಲ್ಲೂ ಕೂಡಾ ಕೋಳಿ ಸಾಕಾಣಿಕೆ ನಡೆದಿದೆ. 500 ಕೋಳಿಗಳನ್ನು ಸಾಕಲಾಗುತ್ತಿದೆ. ಅಲ್ಲಿ ನಾಟಿ ಕೋಳಿ 30, Bv 300 ಕೋಳಿ ಸಾಕಾಣಿಕೆ ಮಾಡಲಾಗಿದೆ.

ಒಟ್ಟಾಗಿ ಕೋಳಿ ಸಾಕಾಣಿಕ ಉದ್ಯಮವು ಒಂದು ಲಾಭದಾಯಕ ಉದ್ಯಮವಾಗಿದೆ ಎನ್ನುವುದು ಅಧ್ಯಯನ ಪ್ರವಾಸದ ಭೇಟಿಯಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಂಡದಲ್ಲಿ ವಿವಿಧ ಮಂದಿ ಆಸಕ್ತರು ಇದ್ದರು.  ಪ್ರವಾಸಕ್ಕೆ ಕೃಷಿ ಇಲಾಖೆ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, NRLM ತಾಲೂಕು ಹಾಗೂ ಜಿಲ್ಲಾ ಪಂಚಾಯತ್, ದ ಕ ಜಿಲ್ಲಾ ಪಂಚಾಯತ್, NRLM ಸಂಜೀವಿನಿ ತಾಲೂಕು ಪಂಚಾಯತ್ , ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟಗಳು  ಸಹಕಾರ ನೀಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

12 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

4 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

5 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

15 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

15 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago