ಕಳೆದ 15 ವರ್ಷಗಳಿಂದ ನೈಸರ್ಗಿಕ ನಾರಿನ ನೇಯ್ಗೆ ಉದ್ಯಮದಲ್ಲಿ ಅನಕಪುತ್ತರ್ ನೇಕಾರರು ಕ್ರಾಂತಿಯನ್ನೇ ಉಂಟು ಮಾಡುತ್ತಿದ್ದಾರೆ.ತಮಿಳುನಾಡಿನಲ್ಲಿ ಬೆಳೆದಿರುವ ಈ ಉದ್ಯಮ ಇದೀಗ ನಶಿಸುತ್ತಿರುವ ಕೈಮಗ್ಗ ಉದ್ಯಮವಾಗಿದೆ. ಇದೀಗ ಈ ಉದ್ಯಮ ಉಳಿಸಲು ಸರ್ಕಾರಗಳು ಸಹಾಯ ಹಸ್ತ ನೀಡಬೇಕು, ಅದರ ಜೊತೆಗೇ ಗ್ರಾಹಕರು ಹೆಚ್ಚಿನ ಆಸಕ್ತಿ ವಹಿಸಬೇಕಿದೆ. ಈ ಉದ್ಯಮ ಬೆಳೆಯುವುದರಿಂದ ದೇಶೀಯತೆ ಹಾಗೂ ಕೃಷಿ ಕ್ಷೇತ್ರಕ್ಕೂ, ಗ್ರಾಮೀಣ ಅಭಿವೃದ್ಧಿಗೂ ನೆರವಾಗಲಿದೆ.
ಕಳೆದ 15 ವರ್ಷಗಳಿಂದ ನೈಸರ್ಗಿಕ ನಾರಿನ ನೇಯ್ಗೆ ಉದ್ಯಮದಲ್ಲಿ ತಮಿಳುನಾಡಿನ ಅನಕಪುತ್ತರ್ ನೇಕಾರರು ಕ್ರಾಂತಿಯನ್ನೇ ಉಂಟು ಮಾಡುತ್ತಿದ್ದಾರೆ. 25 ರೀತಿಯ ನೈಸರ್ಗಿಕ ನಾರುಗಳಲ್ಲಿ ಅನೇಕ ರೀತಿಯ ಉಡುಪುಗಳನ್ನು ಇವರು ತಯಾರಿಸಿದ್ದಾರೆ. ಇವರು ಕೇವಲ ತಮಿಳುನಾಡಿನಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮ ವ್ಯಾಪಾರವನ್ನು ವಿಸ್ತರಿಸಿದ್ದಾರೆ.
ಇಲ್ಲಿನ ಕೈಮಗ್ಗದ ಸಂಘದ ಶೇಖರ್ ಕೇವಲ ಹತ್ತಕ್ಕಿಂತ ಕಡಿಮೆ ಜನರಿರುವ ಪುಟ್ಟ ಮನೆಯಲ್ಲಿ ಇಟ್ಟುಕೊಂಡು ಬಾಳೆ ನಾರಿನಿಂದ ಸೀರೆ ತಯಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಾಳೆ ನಾರಿನಿಂದ ಆರಂಭಿಸಿದ ಈ ಉದ್ಯಮವನ್ನು ಇಂದು ಇವರು ತೆಂಗಿನ ನಾರಿನ ಸೀರೆ, ಬಿದಿರು ನಾರಿನ ಸೀರೆ, ಅಕ್ಕಿ ಕಳ್ಳಿ ಸೀರೆ, ಅನಾನಸ್ ಗಿಡದ ಸೀರೆ, ಕೊಂಗೂರ ಸೀರೆ ನೇಯಲು ಆರಂಭಿಸಿದ್ದಾರೆ. ಕಾಟನ್ ನೂಲಿನಿಂದ ಮಾಡಿದ ಕಾಟನ್ ಸೀರೆಗಿಂತ ಬಾಳೆ ನಾರಿನ ಕಾಟನ್ ಸೀರೆ ಹೆಚ್ಚು ಬಳಕೆಯಾಗುತ್ತಿದೆಯಂತೆ. ಏಕೆಂದರೆ ಇದು ದೇಹಕ್ಕೆ ಹೆಚ್ಚು ತಂಪು ಸಹ ನೀಡುತ್ತದೆ.
ಈ ಬಗ್ಗೆ ಮಾಹಿತಿ ನೀಡುವ ಶೇಖರ್, ನಮ್ಮ ಉದ್ಯಮಗಳಿಗೆ ಸಾಕಷ್ಟು ಜಾಗ ಮಂಜೂರು ಮಾಡುವಂತೆ ಎಂಟು ವರ್ಷಗಳಿಂದ ಕೇಂದ್ರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಿದ್ದರೂ ಇದುವರೆಗೂ ನೀಡಿಲ್ಲ. ಇದು ಬೆಳವಣಿಗೆಯಾದರೆ ನೇಕಾರರಿಗೆ ಸಾಕಷ್ಟು ಆದಾಯ ಸಿಗಲಿದ್ದು, ಯುವಕರಿಗೆ ಸಹ ಉದ್ಯೋಗ ಸಿಗಲಿದೆ ಎಂದು ಹೇಳುತ್ತಾರೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…