MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

Advertisement

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…

3 hours ago

ಬದುಕು ಪುರಾಣ | ಅದು ‘ಎಚ್ಚರ’ದ ರೇಖೆ!

ಬದುಕಿನ ಯಾನಕ್ಕೆ ಪಾಲಕರು ರೇಖೆಯನ್ನು ಎಳೆದು ತೋರಿಸುತ್ತಾರೆ. ಅದು ಭವಿಷ್ಯದ ಕೈತಾಂಗು. ರಕ್ಷಣೆ…

5 hours ago

ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |

ಹನುಮಸಾಗರ ಗ್ರಾಮದ ಏಳು ವರ್ಷದ ಪ್ರದ್ವಿಕಾ ಕಣ್ಣಿಗೆ ಬಟ್ಟೆ ಕಟ್ಟಿ6 ನಿಮಿಷದಲ್ಲಿ 112…

5 hours ago

ಸಾರ್ವಜನಿಕರಲ್ಲಿ ಮಲೇರಿಯಾ ಕುರಿತು ಅರಿವು ಮೂಡಿಸಲು ಜಾಗೃತಿ

ಸಾರ್ವಜನಿಕರಲ್ಲಿ ಮಲೇರಿಯಾ ಕಾಯಿಲೆ ಕುರಿತು ಅರಿವು ಮೂಡಿಸಬೇಕೆಂಬುವುದು ಜಾಥದ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬರೂ…

5 hours ago

50 ವರ್ಷಗಳಲ್ಲಿ ಶೇ 8 ರಷ್ಟು ಜನರ ಭಾಷೆಗಳು ಜಗತ್ತಿನ ಮೇಲೆ ಅಧಿಪತ್ಯ ಸಾಧಿಸುವ ಅಪಾಯ | ಡಾ. ಪುರುಷೋತ್ತಮ ಬಿಳಿಮಲೆ ಎಚ್ಚರಿಕೆ

ಜಾಗತಿಕರಣದ ಆಕ್ರಮಣದಿಂದ ಜನಸಮುದಾಯಗಳ ಪಾರಂಪರಿಕ ಕಲೆ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸಲು ಪರಿಣಾಮಕಾರಿ ಪ್ರಯತ್ನ…

6 hours ago

ಯುದ್ಧ……

ಅವಶ್ಯವಾದರೆ ದೇಶದ ರಕ್ಷಣೆಗಾಗಿ ಯಾವ ತ್ಯಾಗಕ್ಕಾದರೂ ಸಿದ್ದರಾಗೋಣ. ಆದರೆ ಹುಚ್ಚುತನದ ಭಾವನಾತ್ಮಕ ಅಭಿಪ್ರಾಯಗಳಿಗೆ…

6 hours ago