Advertisement
MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

23 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago