Advertisement
MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

16 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago