Advertisement
MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

11 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

20 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

21 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago