Advertisement
MIRROR FOCUS

ಅನಂತ ಕಾಲ ಚಿತ್ರರಂಗದಲ್ಲಿ ನಿಲ್ಲುವ ʻಸಂಕಲ್ಪʻ ಮಾಡಿ ಬಂದ ಅನಂತ್ ನಾಗ್‌ | ಚಿತ್ರರಂಗದಲ್ಲಿ 50 ವರ್ಷಗಳ ಸೇವೆ ಸಲ್ಲಿಸಿದ ಅದ್ಭುತ ನಟ |

Share

ಕನ್ನಡ ಚಿತ್ರರಂಗದಲ್ಲಿ ಯಶಸ್ವಿ 50 ವರ್ಷಗಳನ್ನು ಪೂರೈಸಿ ಈಗಲೂ ಚಲಾವಣೆಯಲ್ಲಿರುವ ಹಾಗೂ ಬಹು ಬೇಡಿಕೆಯ ಕನ್ನಡಿಗರ ನೆಚ್ಚಿನ ನಟ ಅನಂತ್ ನಾಗ್  ಅವರು ಚಿತ್ರರಂಗಕ್ಕೆ ಬಂದು 50 ವರ್ಷ ಕಳೆದಿದೆ. ಬಣ್ಣದ ಲೋಕಕ್ಕೆ ಅವರು ನೀಡಿದ ಸೇವೆ ದೊಡ್ಡದು. ಅವರು ತಮ್ಮ ಕಲಾ ಸೇವೆಯನ್ನು ನಿಲ್ಲಿಸಿಲ್ಲ. ಈಗಲೂ ಹಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಚಿತ್ರರಂಗದಲ್ಲಿ ಅವರು ನೀಡಿದ ಸೇವೆಗೆ ಎಲ್ಲ ಕಡೆಗಳಿಂದ ಶುಭಾಶಯಗಳು ಬರುತ್ತಿವೆ.

‘ಸಂಕಲ್ಪ’ (1973) ಚಿತ್ರದ ಮೂಲಕ ಅನಂತ್ ನಾಗ್ ಬಣ್ಣದ ಲೋಕಕ್ಕೆ ಕಾಲಿಟ್ಟರು. ಈ ಸಿನಿಮಾ ರಿಲೀಸ್ ಆಗಿ 50 ವರ್ಷಗಳು ಕಳೆದಿವೆ. ಐದು ದಶಕಗಳಲ್ಲಿ ಅವರು ನಟಿಸಿದ ಸಿನಿಮಾಗಳಿಗೆ ಲೆಕ್ಕವಿಲ್ಲ. ಫಿಲ್ಮ್​ಫೇರ್, ರಾಜ್ಯ ಪ್ರಶಸ್ತಿ ಸೇರಿ ಅನೇಕ ಅವಾರ್ಡ್​ಗಳು ಅವರಿಗೆ ಸಿಕ್ಕಿವೆ. ಇವೆಲ್ಲಕ್ಕಿಂತ ಮುಖ್ಯವಾಗಿ ಅವರು ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ‘ನನಗೆ ಅವಾರ್ಡ್​ಗಳಿಗಿಂತ ಅಭಿಮಾನ ಮುಖ್ಯ’ ಎಂದು ಈ ಮೊದಲು ಅವರು ಹೇಳಿದ್ದರು. ಅನಂತ್ ನಾಗ್ ಜೊತೆ ಇರುವ ಫೋಟೋ ಹಂಚಿಕೊಂಡಿರುವ ಶಿವರಾಜ್​ಕುಮಾರ್ ಅವರು, ‘ಚಿತ್ರರಂಗದಲ್ಲಿ 50 ವರ್ಷ ಯಶಸ್ವಿಯಾಗಿ ಪೂರೈಸಿದ ಅನಂತ್ ನಾಗ್ ಸರ್ ಅವರಿಗೆ ಹೃತ್ಪೂರ್ವಕ ಅಭಿನಂದನೆ. ನಿಮ್ಮ ಪ್ರತಿಭೆ ವರ್ಚಸ್ಸು ತಲೆಮಾರುಗಳವರೆಗೆ ಪ್ರೇರಣೆ’ ಎಂದು ಬರೆದುಕೊಂಡಿದ್ದಾರೆ.

ರಿಷಬ್ ಶೆಟ್ಟಿ ನಿರ್ದೇಶನದ ‘ಸಹಿಪ್ರಾ ಶಾಲೆ ಕಾಸರಗೋಡು’ ಚಿತ್ರದಲ್ಲಿ ಅನಂತ್ ನಾಗ್ ಅವರು ನಟಿಸಿದ್ದರು. ಅವರು ಮಾಡಿದ ಪಾತ್ರ ಗಮನ ಸೆಳೆದಿತ್ತು. ಹೀಗಾಗಿ ರಿಷಬ್ ಹಾಗೂ ಅನಂತ್​ ನಾಗ್ ಮಧ್ಯೆ ಒಳ್ಳೆಯ ಒಡನಾಟ ಇದೆ. ‘ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ಅನಂತ್ ನಾಗ್ ಸರ್ ಚಿತ್ರರಂಗದಲ್ಲಿ 50 ವಸಂತಗಳನ್ನು ಪೂರೈಸಿದ್ದಾರೆ. ನಮ್ಮ ಸ.ಹಿ.ಪ್ರಾ.ಶಾಲೆ ಕಾಸರಗೋಡು ಚಿತ್ರದ ಅನಂತಪದ್ಮನಾಭರಿಗೆ ಅನಂತ ಶುಭಾಶಯಗಳು. ನಿಮ್ಮ ಪಯಣ ಸ್ಫೂರ್ತಿದಾಯಕ’ ಎಂದು ಅವರು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅನಂತ್ ನಾಗ್ ನಟನೆಯ ‘ತಿಮ್ಮಯ್ಯ & ತಿಮ್ಮಯ್ಯ’, ‘ಗಾಳಿಪಟ 2’,  ‘ವಿಜಯಾನಂದ’, ‘ಮೇಡ್ ಇನ್ ಬೆಂಗಳೂರು’ ಸಿನಿಮಾಗಳು ತೆರೆಗೆ ಬಂದವು. ಈಗ ಅವರು ಕೆಲವು ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಅವರು ರಾಜಕೀಯಕ್ಕೆ ಕಾಲಿಡುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಅದು ನಿಜವಾಗಿಲ್ಲ.

Source : Digital Media

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

6 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

6 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

20 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

24 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago