ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.ಭಾನುವಾರ ರಾತ್ರಿ ಮೊಸಳೆ ಬಬಿಯಾ ಇಲ್ಲವಾಯಿತು. ಈ ಸುದ್ದಿ ತಿಳಿಯುತ್ತಲೇ ನೂರಾರು ಭಕ್ತರು ಆಗಮಿಸಿದರು.
ಬಬಿಯಾ ಇನ್ನಿಲ್ಲವಾದ ಸುದ್ದಿ ತಿಳಿಯುತ್ತಲೇ ಸೋಮವಾರ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಲು ತೊಡಗಿಸಿದರು. ಬಬಿಯಾಗೆ ಅಂತಿಮ ನಮನ ಸಲ್ಲಿಸಿದರು. ಅನಂತ ಪದ್ಮನಾಭ ದೇವಸ್ಥಾನದ ಮುಂಭಾಗದಲ್ಲಿ ದಫನ ಕಾರ್ಯ ನಡೆಯಲಿದೆ. ಇದಕ್ಕೂ ಮೊದಲು ವೈದಿಕರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದೆ. ಕುಂಟಾರು ರವೀಶ ತಂತ್ರಿಗಳು ಆಗಮಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಕಾಸರಗೋಡು ಜಿಲ್ಲೆಯ ಸಂಸದರು, ಶಾಸಕರು ಸಹಿತ ವಿವಿಧ ಗಣ್ಯರು ಆಗಮಿಸಿದ್ದಾರೆ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


