ಧಾರ್ಮಿಕ

ಅನಂತ ಪದ್ಮನಾಭ ದೇವಸ್ಥಾನ | “ಬಬಿಯಾ” ಅಂತ್ಯಸಂಸ್ಕಾರ ಧಾರ್ಮಿಕ ಕಾರ್ಯಕ್ರಮ | ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ‌ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.

Advertisement
Advertisement
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ‌ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.ಭಾನುವಾರ ರಾತ್ರಿ ಮೊಸಳೆ ಬಬಿಯಾ ಇಲ್ಲವಾಯಿತು. ಈ ಸುದ್ದಿ ತಿಳಿಯುತ್ತಲೇ ನೂರಾರು ಭಕ್ತರು ಆಗಮಿಸಿದರು.
ಬಬಿಯಾ ಇನ್ನಿಲ್ಲವಾದ ಸುದ್ದಿ ತಿಳಿಯುತ್ತಲೇ ಸೋಮವಾರ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಲು ತೊಡಗಿಸಿದರು. ಬಬಿಯಾಗೆ ಅಂತಿಮ ನಮನ ಸಲ್ಲಿಸಿದರು.  ಅನಂತ ಪದ್ಮನಾಭ ದೇವಸ್ಥಾನದ ಮುಂಭಾಗದಲ್ಲಿ ದಫನ ಕಾರ್ಯ ನಡೆಯಲಿದೆ. ಇದಕ್ಕೂ ಮೊದಲು ವೈದಿಕರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದೆ.  ಕುಂಟಾರು ರವೀಶ ತಂತ್ರಿಗಳು ಆಗಮಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಕಾಸರಗೋಡು ಜಿಲ್ಲೆಯ ಸಂಸದರು, ಶಾಸಕರು ಸಹಿತ ವಿವಿಧ ಗಣ್ಯರು ಆಗಮಿಸಿದ್ದಾರೆ.
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

2 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

9 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

10 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

17 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

18 hours ago