Advertisement
ಧಾರ್ಮಿಕ

ಅನಂತ ಪದ್ಮನಾಭ ದೇವಸ್ಥಾನ | “ಬಬಿಯಾ” ಅಂತ್ಯಸಂಸ್ಕಾರ ಧಾರ್ಮಿಕ ಕಾರ್ಯಕ್ರಮ | ದೇವಸ್ಥಾನಕ್ಕೆ ಹರಿದು ಬಂದ ಭಕ್ತ ಸಾಗರ |

Share

ಶ್ರದ್ಧೆ ಹಾಗೂ ನಂಬಿಕೆಯ ಪ್ರತಿರೂಪವಾಗಿದ್ದ ಕಾಸರಗೋಡು ಜಿಲ್ಲೆಯ ಕುಂಬಳೆ‌ ಬಳಿಯ ಅನಂತ ಪದ್ಮನಾಭ ಸ್ವಾಮಿ ಕ್ಷೇತ್ರದ ಮೊಸಳೆ ಬಬಿಯಾ ಭಾನುವಾರ ರಾತ್ರಿ ದೈವೈಕ್ಯವಾಗಿದೆ. ಇದೀಗ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಕ್ರಮಗಳ ಮೂಲಕ ಬಬಿಯಾ ಅಂತ್ಯಸಂಸ್ಕಾರ ಕಾರ್ಯಕ್ರಮ ಆರಂಭಗೊಂಡಿದೆ. ಬಬಿಯಾ ಅಂತಿಮ ನಮನಕ್ಕೆ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.

Advertisement
ಸರೋವರ ಕ್ಷೇತ್ರವಾದ ಕಾಸರಗೋಡು ಜಿಲ್ಲೆಯ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದ ಕೆರೆಯಲ್ಲಿದ್ದ ಮೊಸಳೆ ಬಬಿಯಾಗೆ 70 ವರ್ಷಕ್ಕಿಂತಲೂ ಅಧಿಕ ವಯಸ್ಸಾಗಿತ್ತು. ಪೂಜೆಯ ಬಳಿಕ ನೈವೇದ್ಯ ಸೇವನೆಗೆ ಆಗಮಿಸುವ ಮೊಸಳೆ ಅನೇಕ ವರ್ಷಗಳಿಂದ‌ ದೈವೀಕ ಸ್ವರೂಪವಾಗಿ ಆರಾಧನೆಯಾಗುತ್ತಿತ್ತು. ಸಸ್ಯಾಹಾರಿ ಮೊಸಳೆಯಾಗಿ ಕಾಣಿಸಿಕೊಂಡಿದ್ದ ಬಬಿಯಾ ಕಳೆದ ಅನೇಕ ವರ್ಷಗಳಿಂದ ದೇವರ ಪೂಜೆಯ ಬಳಿಕ ಪ್ರಸಾದ ಸೇವನೆ ನಡೆಸುತ್ತಿತ್ತು.ಭಾನುವಾರ ರಾತ್ರಿ ಮೊಸಳೆ ಬಬಿಯಾ ಇಲ್ಲವಾಯಿತು. ಈ ಸುದ್ದಿ ತಿಳಿಯುತ್ತಲೇ ನೂರಾರು ಭಕ್ತರು ಆಗಮಿಸಿದರು.
ಬಬಿಯಾ ಇನ್ನಿಲ್ಲವಾದ ಸುದ್ದಿ ತಿಳಿಯುತ್ತಲೇ ಸೋಮವಾರ ಬೆಳಗ್ಗೆಯಿಂದಲೇ ಭಕ್ತರು ಆಗಮಿಸಲು ತೊಡಗಿಸಿದರು. ಬಬಿಯಾಗೆ ಅಂತಿಮ ನಮನ ಸಲ್ಲಿಸಿದರು.  ಅನಂತ ಪದ್ಮನಾಭ ದೇವಸ್ಥಾನದ ಮುಂಭಾಗದಲ್ಲಿ ದಫನ ಕಾರ್ಯ ನಡೆಯಲಿದೆ. ಇದಕ್ಕೂ ಮೊದಲು ವೈದಿಕರಿಂದ ವಿಷ್ಣು ಸಹಸ್ರನಾಮ ಪಾರಾಯಣ ನಡೆದಿದೆ.  ಕುಂಟಾರು ರವೀಶ ತಂತ್ರಿಗಳು ಆಗಮಿಸಿದ್ದರು. ಕ್ಷೇತ್ರದ ತಂತ್ರಿಗಳಾದ ಗಣೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ. ಕಾಸರಗೋಡು ಜಿಲ್ಲೆಯ ಸಂಸದರು, ಶಾಸಕರು ಸಹಿತ ವಿವಿಧ ಗಣ್ಯರು ಆಗಮಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

5 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

20 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

20 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

20 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

21 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

21 hours ago